ಇಂದು ಸೀಡಿ ಕ್ಲೈಮಾಕ್ಸ್‌: ನ್ಯಾಯಾಲಯದ ಮುಂದೆ ಯುವತಿ ಹಾಜರು ನಿರೀಕ್ಷೆ!

Published : Mar 30, 2021, 07:31 AM IST
ಇಂದು ಸೀಡಿ ಕ್ಲೈಮಾಕ್ಸ್‌: ನ್ಯಾಯಾಲಯದ ಮುಂದೆ ಯುವತಿ ಹಾಜರು ನಿರೀಕ್ಷೆ!

ಸಾರಾಂಶ

 ನ್ಯಾಯಾಲಯದ ಮುಂದೆ ಸೀಡಿ ಯುವತಿ ಹಾಜರು ನಿರೀಕ್ಷೆ| ಇಂದು ಸೀಡಿ ಕ್ಲೈಮಾಕ್ಸ್‌| ಹೇಳಿಕೆ ದಾಖಲಿಗೆ ಹಾಜರಾಗಲು ಅನುಮತಿ ನೀಡಿದ ಬೆಂಗಳೂರಿನ ಮ್ಯಾಜಿಸ್ಪ್ರೇಟ್‌ ಕೋರ್ಟ್‌| ಲೇಡಿ ಹಾಜರಾಗೋದು ಕೋರ್ಟಿಗೋ? ಜಡ್ಜ್‌ ಮನೆಗೋ?| ಕೋರ್ಟ್‌ ಸುತ್ತ ಬಿಗಿಭದ್ರತೆ

 ಬೆಂಗಳೂರು(ಮಾ.30): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭಾಗಿಯಾಗಿದ್ದಾರೆ ಎನ್ನಲಾದ ಸಿ.ಡಿ. ಪ್ರಕರಣ ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದ್ದು, ಸಿ.ಡಿ.ಯಲ್ಲಿನ ಯುವತಿ ಮಂಗಳವಾರ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ.

ಯುವತಿಯ ಪರ ವಕೀಲರು ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದ ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಸೋಮವಾರ ಅರ್ಜಿ ಸಲ್ಲಿಸಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಅರ್ಜಿಯನ್ನು ಪುರಸ್ಕರಿಸಿರುವ ರಿಜಿಸ್ಟ್ರಾರ್‌, ಪ್ರಕರಣವನ್ನು 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿಕೊಂಡಿದ್ದು, ಮಂಗಳವಾರ ವಿಚಾರಣೆಗೆ ನಿಗದಿಪಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಯುವತಿಯ ಪರ ವಕೀಲ ಬಿ.ಎನ್‌.ಜಗದೀಶ್‌, ಅತ್ಯಾಚಾರಕ್ಕೊಳಗಾಗಿದ್ದಾರೆ ಎನ್ನಲಾದ ಯುವತಿಗೆ ಪ್ರಾಣ ಬೆದರಿಕೆ ಇದೆ. ಅಲ್ಲದೆ, ಅತ್ಯಾಚಾರ ಎಸಗಿರುವ ಆರೋಪಿ ಅತ್ಯಂತ ಪ್ರಭಾವಿಯಾಗಿದ್ದು, ವಿಶೇಷ ತನಿಖಾ ದಳದ ಮುಂದೆ ಹಾಜರಾದಲ್ಲಿ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇಲ್ಲ. ಆದ್ದರಿಂದ ಸಿಆರ್‌ಪಿಸಿ 164 ಅಡಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಲಾಗಿತ್ತು. ನಮ್ಮ ಮನವಿಯನ್ನು ಪುರಸ್ಕರಿಸಿರುವ ರಿಜಿಸ್ಟ್ರಾರ್‌, ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿಕೊಳ್ಳುವುದಕ್ಕೆ ಅನುಮತಿ ನೀಡಿದ್ದಾರೆ. ಅಲ್ಲದೆ, ನ್ಯಾಯಾಲಯ ತಿಳಿಸಿದ ಸಮಯದಲ್ಲಿ ಸಂತ್ರಸ್ತೆಯನ್ನು ಹಾಜರುಪಡಿಸಲು ಸಿದ್ಧರಿದ್ದೇವೆ ಎಂದರು.

ಆದರೆ, ಎಲ್ಲಿ ಮತ್ತು ಯಾವಾಗ ಹಾಜರುಪಡಿಸಬೇಕು ಎಂಬುದನ್ನು ತಿಳಿಸಿಲ್ಲ. ನ್ಯಾಯಾಧೀಶರ ಮನೆಗೆ ಹಾಜರುಪಡಿಸಬೇಕಾ ಅಥವಾ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾ ಎಂಬುದನ್ನು ಇ-ಮೇಲ್‌ ಮೂಲಕ ತಿಳಿಸುವುದಾಗಿ ನ್ಯಾಯಾಲಯದ ಅಧಿಕಾರಿಗಳು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.

ಅಲ್ಲದೆ, ಯುವತಿಗೆ ಪ್ರಾಣ ಬೆದರಿಕೆಯಿರುವುದರಿಂದ ಎಲ್ಲಿಂದ ಭದ್ರತೆ ಒದಗಿಸಬೇಕು ಎಂಬುದನ್ನು ಶೀಘ್ರದಲ್ಲಿ ಎಸ್‌ಐಟಿಗೆ ತಿಳಿಸಲಾಗುವುದು ಎಂದು ಇದೇ ವೇಳೆ ಜಗದೀಶ್‌ ಹೇಳಿದರು.

ನಿನ್ನೆ ಕೋರ್‌್ಟಗೆ ಬಾರದ ಯುವತಿ:

ಸೋಮವಾರ ಯುವತಿ ಕೋರ್ಟ್‌ ಮುಂದೆ ಹಾಜರಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸಿಎಂಎಂ ಕೋರ್ಟ್‌ ಸುತ್ತ-ಮುತ್ತ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್‌ ಪಾಟೀಲ್‌ ನೇತೃತ್ವದಲ್ಲಿ 2 ಎಸಿಪಿ, 5 ಇನ್‌ಸ್ಪೆಕ್ಟರ್‌, 10 ಸಬ್‌ ಇನ್‌ಸ್ಪೆಕ್ಟರ್‌ ಸೇರಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಯುವತಿ ಹಾಜರಾಗಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿ 'ತೇಜಸ್ವಿ' ಲೋಕದ ಅನಾವರಣ, ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ