ನಟೇಶ್ ಬಡ್ತಿಗಾಗಿ ಮುಖ್ಯ ಕಾರ್ಯದರ್ಶಿ ಕೋಟಿ ಲಂಚ ಆರೋಪ, 12 ಪ್ರಶ್ನೆಗಳಾಗಿ ಎಳೆಎಳೆಯಾಗಿ ಉತ್ತರ ಕೊಟ್ಟ ಶಾಲಿನಿ ರಜನೀಶ್

Published : Feb 19, 2026, 03:28 PM IST
shalini rajneesh

ಸಾರಾಂಶ

ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ಮುಂಬಡ್ತಿ ನೀಡಲು ಹಣ ಪಡೆದಿದ್ದಾರೆ ಎಂಬ ಆರೋಪವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಳ್ಳಿಹಾಕಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಮಾಡಿದ ಆರೋಪಗಳು ಆಧಾರರಹಿತವಾಗಿದ್ದು, ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಲಾಗಿದೆ.

ಬೆಂಗಳೂರು: ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ಮುಡಾ ಮಾಜಿ ಆಯುಕ್ತ ನಟೇಶ್ ಬಡ್ತಿಗಾಗಿ ಹಣ ಪಡೆದಿದ್ದಾರೆ ಎಂಬ ಗಂಭೀರ ಆರೋಪಗಳು ರಾಜ್ಯ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಈ ಆರೋಪಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ಮುಂಬಡ್ತಿ ನೀಡುವ ಸಲುವಾಗಿ ಹಣ ಸ್ವೀಕರಿಸಲಾಗಿದೆ ಎಂಬ ಆರೋಪವನ್ನು ದೂರುದಾರ ಸ್ನೇಹಮಯಿ ಕೃಷ್ಣ ಮಾಡಿದ್ದರು. ಈ ದೂರಿಗೆ ಸಂಬಂಧಿಸಿ ಇದೀಗ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

 ಈಗಾಗಲೇ ಉತ್ತರ ನೀಡಲಾಗಿದೆ:  ಸಿಎಸ್ ಸ್ಪಷ್ಟನೆ

ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಈಗಾಗಲೇ ಸ್ಪಷ್ಟ ಉತ್ತರ ನೀಡಲಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸಹ ಅಧಿಕೃತವಾಗಿ ಉತ್ತರ ಕಳುಹಿಸಲಾಗಿದೆ  ಎಂದು ತಿಳಿಸಿದ್ದಾರೆ.

ಆಧಾರರಹಿತ ಆರೋಪಗಳಿಗೆ ಕಾನೂನು ಕ್ರಮದ ಎಚ್ಚರಿಕೆ

ಇನ್ನು, ಯಾವುದೇ ಸಾಕ್ಷ್ಯವಿಲ್ಲದೆ ಮಾಡಲಾಗುತ್ತಿರುವ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇಂತಹ ಆರೋಪಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಕೂಡ ಅವರು ನೀಡಿದ್ದಾರೆ. ಸರ್ಕಾರದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ನಟೇಶ್ ಬಡ್ತಿ ಆರೋಪದ ಹಿನ್ನೆಲೆ

ಮುಡಾ ಮಾಜಿ ಆಯುಕ್ತ ಹಾಗೂ ಹಾಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ. ನಟೇಶ್ ಅವರಿಗೆ ಮುಂಬಡ್ತಿ ನೀಡಲು ಹಣ ನೀಡಲಾಗಿದೆ ಎಂಬ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದರು. ಈ ಸಂಬಂಧ ಅವರು ವಿವಿಧ ತನಿಖಾ ಸಂಸ್ಥೆಗಳಿಗೆ ದೂರು ಸಲ್ಲಿಸಿದ್ದಾಗಿ ಹೇಳಿದ್ದರು. ಶಾಲಿನಿ ರಜನೀಶ್ ಅವರಿಗೆ 1.60 ಕೋಟಿ ರೂ ಹಣ ನೀಡಲಾಗಿದೆ. ಮೈಸೂರಿಗೆ ಕಂತೆ ಕಂತೆಯಾಗಿ ಕಾರಿನಲ್ಲಿ 9 ಕೋಟಿ ಹಣ ಹೋಗಿದೆ ಎಂದು ಆರೋಪಿಸಿದ್ದರು.

ದೂರುದಾರರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ

ಸ್ನೇಹಮಯಿ ಕೃಷ್ಣ ಅವರು ಕೇಳಿದ್ದ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ಪಷ್ಟನೆ ನೀಡಿದ್ದು, ತಮ್ಮ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಜೊತೆಗೆ 12 ಪ್ರಶ್ನೆಗಳಿಗೆ ಉತ್ತರವಾಗಿ ಪ್ರತಿಯೊಂದಕ್ಕೂ ವಿವರಣಾತ್ಮಕ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ, ದೂರುದಾರ ಸ್ನೇಹಮಯಿ ಕೃಷ್ಣ ಮಾಡಿದ್ದ ಆರೋಪಗಳಿಗೆ ಸರ್ಕಾರದ ಉನ್ನತ ಮಟ್ಟದಿಂದಲೇ ಸ್ಪಷ್ಟನೆ ದೊರೆತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಿರಿಯ ವಯಸ್ಸಿಗೆ ನ್ಯಾಯಾಧೀಶ ಪಟ್ಟ: ಶಿರಸಿ ಸುಮಂತ್‌ 2ನೇ ರ‍್ಯಾಂಕ್‌, ಧಾರವಾಡ ಸುಧಾ 24ನೇ ವಯಸ್ಸಿಗೆ ಜಡ್ಜ್!
ಹೀರೋಗಳಿಗಿಂತ ಅತಿ ಹೆಚ್ಚು ಸಂಭಾವನೆ ಪಡೆದ ಕನ್ನಡದ ಏಕೈಕ ನಟಿ ಮಾಲಾಶ್ರೀ; ಇದು ಸಾಧ್ಯವಾಗಿದ್ದು ಹೀಗೆ..!