ನಾಳೆ 3991 ಪೇದೆ ನೇಮಕಾತಿ ಪರೀಕ್ಷೆ: ಮೊದಲ ಬಾರಿಗೆ ಒಎಂಆರ್ ದೊಡ್ಡ ಬದಲಾವಣೆ, ಅಭ್ಯರ್ಥಿಗಳೇ ಈ ವಿಷಯ ತಿಳಿದಿರಲಿ!

Kannadaprabha News   | Kannada Prabha
Published : Aug 01, 2026, 06:42 AM IST
Karnataka: Civil police constable exam on Aug 2 be aware these rules before entry in exam center.

ಸಾರಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ. ಈ ಬಾರಿ ಹೊಸ ಓಎಂಆರ್ ಸ್ಕ್ಯಾನಿಂಗ್ ವ್ಯವಸ್ಥೆ, ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ನಿಷೇಧದಂತಹ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಬೆಂಗಳೂರು (ಆ.1): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆ.2ರಂದು ರಾಜ್ಯದ 884 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷಗೆ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಒಟ್ಟು 4,54,532 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಇದೇ ಮೊದಲ ಬಾರಿಗೆ ಹೊಸ ವ್ಯವಸ್ಥೆ

ಇದೇ ಮೊದಲ ಬಾರಿಗೆ ಓಎಂಆರ್ ಪ್ರತಿಗಳ ಸ್ಕ್ಯಾನಿಂಗ್ ಅನ್ನು ಬೆಂಗಳೂರು ಅಲ್ಲದೆ 6 ಕಡೆ ಮಾಡಲಾಗುತ್ತಿದೆ. ಪರೀಕ್ಷೆ ಮುಗಿದ ಕೂಡಲೇ ಕಲ್ಬುರ್ಗಿ, ಹುಬ್ಬಳ್ಳಿ, ಮೈಸೂರು, ದಾವಣಗೆರೆ, ವಿಜಯಪುರ, ರಾಯಚೂರು ನಗರಗಳಲ್ಲಿ ಓಎಂಆರ್ ಪ್ರತಿ ಸ್ಕ್ಯಾನ್ ಮಾಡಿ, ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷೆಗೆ ನಿರ್ಧಿಷ್ಟ ವಸ್ತ್ರ ಸಂಹಿತೆ ನಿಗದಿಪಡಿಸಲಾಗಿದೆ. ಒಂದು ವೇಳೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಎರಡು ಗಂಟೆ ಮುಂಚೆಯೇ ಬಂದ ತಪಾಸಣೆಗೆ ಒಳಗಾಗಬೇಕಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ‌ ಬಿಡಲಾಗುತ್ತದೆ. ಪರೀಕ್ಷಾ ಕೇಂದ್ರ ಹಾಗೂ ಕೊಠಡಿಯಲ್ಲಿ ಸಿಸಿಟಿವಿ ಕಣ್ಗಾವಲು ಇರುತ್ತದೆ. ತಪಾಸಣೆ ಮತ್ತು ಸಿಸಿಟಿವಿ ಕಣ್ಗಾವಲಿನ ಜವಾಬ್ದಾರಿಯನ್ನು ಆಯಾ ಜಿಲ್ಲಾ ಪೊಲೀಸರು ನಿರ್ವಹಣೆ ಮಾಡಲಿದ್ದಾರೆ. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ‌ ಕಾರ್ಯನಿರ್ವಹಣೆಗೆ ನಿರ್ಬಂಧ ವಿಧಿಸಲು ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್ ಅಳವಡಿಸಲಾಗಿದೆ‌. ಮೊಬೈಲ್, ಕ್ಯಾಮರಾ, ಬ್ಲೂಟೂತ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿಷೇಧ ಇದೆ. ಯಾವುದೇ ಕೈಗಡಿಯಾರ ಕೂಡ ಧರಿಸುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಳಿನ ಪೇದೆ ನೇಮಕಾತಿ ಪರೀಕ್ಷೆಗೆ ಇವುಗಳು ನಿಷೇಧ

ಕಿವಿ, ತಲೆ ಮತ್ತು ಮುಖ ಮುಚ್ಚುವಂತಹ ಯಾವುದೇ ಉಡುಪುಗಳನ್ನು ಧರಿಸಿಕೊಂಡು ಬರುವಂತಿಲ್ಲ. ಉದ್ದ ತೋಳಿನ ಡ್ರೆಸ್ ಗೂ ನಿಷೇಧ ಇದೆ. ಮೂಗುತಿ, ಮಂಗಳ ಸೂತ್ರ ಹೊರತುಪಡಿಸಿ ಉಳಿದ ಯಾವುದೇ ಆಭರಣ/ಲೋಹದ ವಸ್ತುಗಳನ್ನು ಧರಿಸುವಂತಿಲ್ಲ. ಶೂ ಧರಿಸುವಂತಿಲ್ಲ. ಬದಲಿಗೆ ಚಪ್ಪಲಿ, ಕಡಿಮೆ ಹಿಮ್ಮಡಿ ಇರುವ ಸ್ಯಾಂಡಲ್ ಧರಿಸಬಹುದು ಎಂದು ಅವರು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Siddaramaiah Shopping: ಮಂತ್ರಿ ಮಾಲ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಾಪಿಂಗ್‌!
ಇಂಗ್ಲೆಂಡ್‌ನಲ್ಲಿ ಭಾರತ ದಿವ್ಯಾಂಗ ಕ್ರಿಕೆಟ್‌ ತಂಡದ ಪರ ಆಡಲಿದ್ದಾನೆ ವಿಜಯಪುರದ ಚಿಂದಿ ಆಯುವವನ ಪುತ್ರ