ಕೊರೋನಾ ಭೀತಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್

Published : Aug 06, 2021, 03:41 PM ISTUpdated : Aug 06, 2021, 05:12 PM IST
ಕೊರೋನಾ ಭೀತಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಆತಂಕ * ರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳ * ಕರ್ನಾಟಕದಲ್ಲಿ ಹೈ ಅಲರ್ಟ್

ಬೆಂಗಳೂರು, (ಆ.06): ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಶುರುವಾಗಿದೆ. ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ಸೋಂಕು ಕರ್ನಾಟಕದಲ್ಲಿ ಆತಂಕ ಉಂಟುಮಾಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆ.06) ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು  ಸಭೆ ನಡೆಸಿದರು.

ದೀರ್ಘಾವಧಿ ಕೋವಿಡ್‌ ಬಗ್ಗೆ ಡಬ್ಲ್ಯುಎಚ್‌ಒ ಕಳವಳ

ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (ಕಲಬುರಗಿ, ಮೈಸೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ ಹಾಗೂ ಕೊಡಗು)

2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು. 

4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು

5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು. 

"

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಬಿಗ್‌ಬಾಸ್ ಶೋ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌