ಲಾಕ್‌ಡೌನ್‌ ವಿಸ್ತರಣೆ ಜೊತೆಗೆ 500 ಕೋಟಿ ರೂ. ಪ್ಯಾಕೇಜ್ ಘೋಷಣೆ

Published : Jun 03, 2021, 05:45 PM ISTUpdated : Jun 03, 2021, 07:33 PM IST
ಲಾಕ್‌ಡೌನ್‌ ವಿಸ್ತರಣೆ ಜೊತೆಗೆ 500 ಕೋಟಿ ರೂ. ಪ್ಯಾಕೇಜ್ ಘೋಷಣೆ

ಸಾರಾಂಶ

* ಜೂನ್ 07ರ ಬಳಿಕವೂ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ *ಲಾಕ್‌ಡೌನ್‌ ವಿಸ್ತರಣೆ ಜೊತೆಗೆ ಎರಡನೇ ಪ್ಯಾಕೇಜ್ ಘೋಷಿಸಿದ ಸಿಎಂ * ಒಟ್ಟು 500 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಬಿಎಸ್‌ವೈ 

ಬೆಂಗಳೂರು, (ಜೂನ್.03): ಕೊರೋನಾ ಎರಡನೇ ಅಲೆಯ ಮೊದಲ ಹಂತದ ಲಾಕ್‌ಡೌನ್‌ ವೇಳೆ  1,250 ಕೋಟಿ ರೂ. ಮೊತ್ತದ ಪರಿಹಾರ ಪ್ಯಾಕೇಜ್ ಘೋಷಿಸಿದ್ದ ಸಿಎಂ ಬಿಎಸ್‌ವೈ ಈಗ 2ನೇ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

"

ಇಂದು (ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜೂನ್‌ 7ರ ನಂತರ ಒಂದು ವಾರ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಅಧಿಕೃತವಾಗಿ ತಿಳಿಸಿದರು. ಇದೇ ವೇಳೇ 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು (ಗುರುವಾರ) ಘೋಷಣೆ ಮಾಡಿದರು.

ಜೂನ್ 07ರ ಬಳಿಕವೂ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ: ಸಿಎಂ ಅಧಿಕೃತ ಘೋಷಣೆ

ನೇಕಾರರು, ಚಲನಚಿತ್ರ ಹಾಗೂ ದೂರದರ್ಶನ ನೋಂದಾಯಿತ ಕಾರ್ಮಿಕರಿಗೆ, ಮೀನುಗಾರರು, ಮುಜುರಾಯಿ ಇಲಾಖೆಯ ಅರ್ಚಕರು ಮತ್ತು ಅಡುಗೆ ಸಿಬ್ಬಂದಿ, ಮಸೀದಿ ಬೇಸಿಮಾ ಮೌಜಿನ್‌ಗಳಿಗೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದರು.

ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ ಜೂನ್ ಮತ್ತು ಜುಲೈನಲ್ಲಿ ಹಾಲಿನ ಪುಡಿ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!