ಸಿಎಂ ಮಾತು ತಪ್ಪೋರಲ್ಲ, ಏನು ಮಾತು ಕೊಟ್ಟಿದ್ದಾರೋ ಅದು ಗೊತ್ತಿಲ್ಲ: ಕೊತ್ತೂರು ಮಂಜುನಾಥ

Kannadaprabha News, Ravi Janekal |   | Kannada Prabha
Published : Nov 22, 2025, 06:23 AM IST
Karnataka CM change discussion MLA Kottur Manjunath s statement

ಸಾರಾಂಶ

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕೇವಲ ಮಾಧ್ಯಮ ಸೃಷ್ಟಿ ಎಂದಿರುವ ಶಾಸಕ ಕೊತ್ತೂರು ಮಂಜುನಾಥ್, ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದಿದ್ದಾರೆ. ಜಾತಿ ಆಧಾರದಲ್ಲಿ ಸಿಎಂ ಸ್ಥಾನ ಕೇಳುವುದು ತಪ್ಪು, ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಅವರು ಸ್ಪಷ್ಟನೆ.

ಕೋಲಾರ (ನ.22): ಹೈಕಮಾಂಡ್‌ನಲ್ಲಿ ತೀರ್ಮಾನ ಆಗಿರೋದು ನಮಗೆ ಗೊತ್ತಿಲ್ಲ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರಬೇಕು. ಜನರ ಆಶೀರ್ವಾದ ಇರೋವರೆಗೂ ನಾನು ಸಿಎಂ ಆಗಿರುತ್ತೇನೆ ಅಂತ ಸಿದ್ದರಾಮಯ್ಯ ಹೇಳಿರೋದ್ರಲ್ಲಿ ತಪ್ಪೇನಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಸುರೇಶ್ ಹೇಳಿದಂತೆ ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪೋರಲ್ಲ. ಅವರು ಏನೂ ಮಾತು ಕೊಟ್ಟಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದರು.

ಸಿಎಂ ಬದಲಾವಣೆ ಕೇವಲ ಮಾಧ್ಯಮಗಳ ಚರ್ಚೆ:

ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗುತ್ತಿದೆ. ಶಾಸಕರು ದೆಹಲಿಗೆ ಹೋಗಬಾರದ? ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಸಿಎಂ ಸ್ಥಾನ ಕೇಳೋದು ತಪ್ಪು:

ಜಾತಿ ಆಧಾರದಲ್ಲಿ ಸಿಎಂ ಸ್ಥಾನ ಕೇಳೋದು ತಪ್ಪು, ಮಾಗಡಿ ಶಾಸಕರು ಆ ರೀತಿ ಏನಾದರೂ ಕೇಳಿದರೆ ನಾವು ಒಪ್ಪೋದಿಲ್ಲ. ಕರ್ನಾಟಕದಲ್ಲಿ ಎಲ್ಲಾ ಜಾತಿ ಅವರು ಇದ್ದು, ಬೇರೆ ಬೇರೆ ಜಾತಿಗಳಲ್ಲಿ ಇವರಿಗಿಂತ ಹಿರಿಯರು ಇದ್ದಾರೆ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಂಡು ಹೋಗೋದು ಒಳ್ಳೇಯದು. ಮುಂಬರುವ ಚುನಾವಣೆಯಲ್ಲಿ ಒಕ್ಕಲಿಗರು ಮತ ಹಾಕ್ತಾರೋ ಇಲ್ವೋ ಅನ್ನೋದು ಚುನಾವಣೆ ಸಂದರ್ಭದಲ್ಲಿ ಗೊತ್ತಾಗಲಿದೆ. ಖಂಡಿತವಾಗಿ ಶ್ರಮ ಪಡೋರಿಗೆ ಫಲ ಸಿಗಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!