
ಕೋಲಾರ (ನ.22): ಹೈಕಮಾಂಡ್ನಲ್ಲಿ ತೀರ್ಮಾನ ಆಗಿರೋದು ನಮಗೆ ಗೊತ್ತಿಲ್ಲ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರಬೇಕು. ಜನರ ಆಶೀರ್ವಾದ ಇರೋವರೆಗೂ ನಾನು ಸಿಎಂ ಆಗಿರುತ್ತೇನೆ ಅಂತ ಸಿದ್ದರಾಮಯ್ಯ ಹೇಳಿರೋದ್ರಲ್ಲಿ ತಪ್ಪೇನಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಸುರೇಶ್ ಹೇಳಿದಂತೆ ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪೋರಲ್ಲ. ಅವರು ಏನೂ ಮಾತು ಕೊಟ್ಟಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದರು.
ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗುತ್ತಿದೆ. ಶಾಸಕರು ದೆಹಲಿಗೆ ಹೋಗಬಾರದ? ಎಂದು ಪ್ರಶ್ನಿಸಿದರು.
ಜಾತಿ ಆಧಾರದಲ್ಲಿ ಸಿಎಂ ಸ್ಥಾನ ಕೇಳೋದು ತಪ್ಪು, ಮಾಗಡಿ ಶಾಸಕರು ಆ ರೀತಿ ಏನಾದರೂ ಕೇಳಿದರೆ ನಾವು ಒಪ್ಪೋದಿಲ್ಲ. ಕರ್ನಾಟಕದಲ್ಲಿ ಎಲ್ಲಾ ಜಾತಿ ಅವರು ಇದ್ದು, ಬೇರೆ ಬೇರೆ ಜಾತಿಗಳಲ್ಲಿ ಇವರಿಗಿಂತ ಹಿರಿಯರು ಇದ್ದಾರೆ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಂಡು ಹೋಗೋದು ಒಳ್ಳೇಯದು. ಮುಂಬರುವ ಚುನಾವಣೆಯಲ್ಲಿ ಒಕ್ಕಲಿಗರು ಮತ ಹಾಕ್ತಾರೋ ಇಲ್ವೋ ಅನ್ನೋದು ಚುನಾವಣೆ ಸಂದರ್ಭದಲ್ಲಿ ಗೊತ್ತಾಗಲಿದೆ. ಖಂಡಿತವಾಗಿ ಶ್ರಮ ಪಡೋರಿಗೆ ಫಲ ಸಿಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ