ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಕೇಳಿಬಂದ ಬೆನ್ನಲ್ಲೇ ಸಿದ್ದರಾಮಯ್ಯರ ಪರ ಲಕ್ಷ್ಮಣ್ ಸವದಿ ಫುಲ್ ಬ್ಯಾಟಿಂಗ್!

Published : Oct 07, 2024, 06:54 PM IST
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಕೇಳಿಬಂದ ಬೆನ್ನಲ್ಲೇ ಸಿದ್ದರಾಮಯ್ಯರ ಪರ ಲಕ್ಷ್ಮಣ್ ಸವದಿ ಫುಲ್ ಬ್ಯಾಟಿಂಗ್!

ಸಾರಾಂಶ

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಕೆಲವರು ಸಿಎಂ ಬದಲಾವಣೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ?

ಚಿಕ್ಕೋಡಿ (ಅ.7): ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಕೇಳಿಬಂದಿದ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ವತಃ  ಜಾರಕಿಹೊಳಿ ಹೇಳಿದ್ದರೂ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಈ ನಡುವೆ ಸಿಎಂ ಹುದ್ದೆಗೆ ಸತೀಶ್ ಜಾರಕಿಹೊಳಿ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಫುಲ್ ಬ್ಯಾಟಿಂಗ್ ಮಾಡಿದ್ದಾರೆ.

ವಿಜಯೇಂದ್ರ ಇನ್ನೂ ಎಳಸು ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ: ಈಶ್ವರಪ್ಪ ವಾಗ್ದಾಳಿ

ಸಿಎಂ ಬದಲಾವಣೆ ಕೂಗು ವಿಚಾರವಾಗಿ ಇಂದು ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಕೆಲವರು ಸಿಎಂ ಬದಲಾವಣೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದಿದ್ದಾರೆ.

ಸಿಎಂ ಬದಲಾವಣೆ ಎಂಬುದು ಕೇವಲ ಮಾಧ್ಯಮದಲ್ಲಿ ಕೇಳಿಬರುತ್ತಿರುವ ಊಹಾಪೋಹಗಳು ಅಷ್ಟೆ. ವಿರೋಧ ಪಕ್ಷಗಳಿಗೆ ಕೆಲಸವಿಲ್ಲ ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಒಳ್ಳೆಯ ಸಿಎಂಗೆ ಕಪ್ಪು ಚುಕ್ಕೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಎಷ್ಟೇ ಅಪಪ್ರಚಾರ ಮಾಡಿದರೂ ಸಿಎಂ ಬದಲಾವಣೆ ಮಾಡುವ ಸಂಚು ಅವರಿಗೆ ಸಾಧ್ಯವಾಗಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ