ಸಿಎಂ ಮನೆಯ ಹಸುವಿನ ಸಗಣಿ, ಬಳಸಿ ಕಬ್ಬನ್‌ ಪಾರ್ಕಲ್ಲಿ ಗೊಬ್ಬರ!

Published : Jul 01, 2020, 08:03 AM ISTUpdated : Jul 01, 2020, 09:28 AM IST
ಸಿಎಂ ಮನೆಯ ಹಸುವಿನ ಸಗಣಿ, ಬಳಸಿ ಕಬ್ಬನ್‌ ಪಾರ್ಕಲ್ಲಿ ಗೊಬ್ಬರ!

ಸಾರಾಂಶ

ಸಿಎಂ ಮನೆಯ ಹಸುವಿನ ಸಗಣಿ, ಬಳಸಿ ಕಬ್ಬನ್‌ ಪಾರ್ಕಲ್ಲಿ ಗೊಬ್ಬರ| ಪಾರ್ಕ್ನಲ್ಲಿ ವ್ಯರ್ಥವಾಗುತ್ತಿದ್ದ ಎಲೆ, ಹುಲ್ಲು ಬಳಸಿ ತಯಾರಿಕೆ

ಬೆಂಗಳೂರು(ಜು.01): ಕಬ್ಬನ್‌ ಉದ್ಯಾನವನದಲ್ಲಿ ಉತ್ಪತ್ತಿಯಾಗುವ ಎಲೆ, ಹುಲ್ಲು ಸೇರಿದಂತೆ ಇತರೆ ತ್ಯಾಜ್ಯವನ್ನು ಬಳಸಿ ಎರೆಹುಳು ಗೊಬ್ಬರ ತಯಾರಿಸುವ ಘಟಕವನ್ನು ತೋಟಗಾರಿಕೆ ಇಲಾಖೆ ಪ್ರಾರಂಭಿಸಿದೆ.

ಉದ್ಯಾನವನದಲ್ಲಿನ ತ್ಯಾಜ್ಯವನ್ನು ಈವರೆಗೂ ವಿಲೇವಾರಿ ಮಾಡಲಾಗುತ್ತಿತ್ತು. ಆದರೆ, ಇದೀಗ ಎರೆಹುಳು ಗೊಬ್ಬರಕ್ಕೆ ಬಳಸಲಾಗುತ್ತಿದೆ. ಈ ಗೊಬ್ಬರವನ್ನು ಕಬ್ಬನ್‌ ಉದ್ಯಾನ ಸೇರಿದಂತೆ ವಿಧಾನಸೌಧ ಹಾಗೂ ರಾಜಭವನದ ಉದ್ಯಾನಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಕಾವೇರಿ ನಿವಾಸಕ್ಕೆ ಶ್ರೀ ಸಿದ್ಧಲಿಂಗಸ್ವಾಮಿ, ಕರುವಿನ ಮೈದಡವಿದ ಶ್ರೀಗಳು!

ಎರೆಹುಳು ಗೊಬ್ಬರ ತಯಾರಿಸುವುದಕ್ಕೆ ಮುಖ್ಯಮಂತ್ರಿಗಳ ಮನೆಯಲ್ಲಿನ ಹಸುಗಳ ಸಗಣಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ, ಕೊರತೆಯಾದ ಸಗಣಿಯನ್ನು ಹೊರಭಾಗದಿಂದ ಖರೀದಿ ಮಾಡಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ (ಕಬ್ಬನ್‌ ಉದ್ಯಾನವನ) ಜಿ.ಗುಣವಂತ ತಿಳಿಸಿದ್ದಾರೆ.

ಲಾಕ್‌ಡೌನ್ ಮಧ್ಯೆ ಸಿಎಂ ಮನೆಗೆ ಹೊಸ ಅತಿಥಿ: ಸಂತಸದಿಂದ ಸ್ವಾಗತಿಸಿದ ಬಿಎಸ್‌ವೈ

ಉದ್ಯಾನದ ಈ ಘಟಕದಲ್ಲಿ ವಾರ್ಷಿಕ ಸುಮಾರು ಐದು ಟನ್‌ ಎರೆಹುಳು ಗೊಬ್ಬರ ಉತ್ಪಾದನೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಸುಮಾರು 1.5 ಟನ್‌ ಎರೆಹುಳು ಗೊಬ್ಬರ ಉತ್ಪಾದನೆಯಾಗುತ್ತಿದ್ದು, ಪ್ರಸ್ತುತ ಇಲಾಖೆ ಅಧೀನದ ಉದ್ಯಾನವನಗಳಿಗೆ ಬಳಕೆ ಮಾಡುತ್ತಿದ್ದು, ಉತ್ಪಾದನೆ ಹೆಚ್ಚಾದಲ್ಲಿ ಖಾಸಗಿಯವರಿಗೆ ಮಾರುವ ಕುರಿತು ಯೋಚಿಸಬಹುದಾಗಿದೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!