'ನೀವು ಯಾರನ್ನಾದ್ರೂ ಸಿಎಂ, ಡಿಸಿಎಂ ಮಾಡಿಕೊಳ್ಳಿ; ನಮಗೆ ಮೀಸಲಾತಿ ಕೊಡಿ': ಜಯಮೃತ್ಯುಂಜಯಶ್ರೀ

Published : Jul 02, 2024, 06:10 PM IST
'ನೀವು ಯಾರನ್ನಾದ್ರೂ ಸಿಎಂ, ಡಿಸಿಎಂ ಮಾಡಿಕೊಳ್ಳಿ; ನಮಗೆ ಮೀಸಲಾತಿ ಕೊಡಿ': ಜಯಮೃತ್ಯುಂಜಯಶ್ರೀ

ಸಾರಾಂಶ

ಸರ್ಕಾರದವರು ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿಕೊಳ್ಳಿ, ಯಾರನ್ನಾದ್ರೂ ಡಿಸಿಎಂ ಮಾಡಿಕೊಳ್ಳಿ ಆದ್ರೆ ನಮ್ಮ ಸಮುದಾಯದ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಮೀಸಲಾತಿ ಕೊಡಿ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದರು.

ಬಾಗಲಕೋಟೆ (ಜು.2): ಸರ್ಕಾರದವರು ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿಕೊಳ್ಳಿ, ಯಾರನ್ನಾದ್ರೂ ಡಿಸಿಎಂ ಮಾಡಿಕೊಳ್ಳಿ ಆದ್ರೆ ನಮ್ಮ ಸಮುದಾಯದ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಮೀಸಲಾತಿ ಕೊಡಿ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಪಂಚಮಸಾಲಿ ಸಮುದಾಯ(panchamasali community)ಕ್ಕೆ 2A ಮೀಸಲಾತಿ(2A reservation) ಕೊಟ್ಟು ಪುಣ್ಯಕಟ್ಟಿಕೊಳ್ಳಿ ಎಂದರು.

ಚನ್ನಪಟ್ಟಣ ಉಪಚುನಾವಣೆ: ಯಾರೇ ಅಭ್ಯರ್ಥಿ ಇದ್ರೂ ನನ್ನ ಮುಖ ನೋಡಿ ಓಟು ಹಾಕಿ: ಡಿಕೆ ಶಿವಕುಮಾರ

ಧರ್ಮಗುರುಗಳಾದವರು ಸರ್ಕಾರದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬಾರದು. ಪಕ್ಷದ ವರಿಷ್ಠರು ಏನಾದ್ರು ಕೇಳಿದ್ರೆ ಸಲಹೆಗಳನ್ನ ಕೊಡಬೇಕು. ಯಾರನ್ನ ಸಿಎಂ, ಡಿಸಿಎಂ ಮಾಡಬೇಕೆನ್ನೋದು ವರಿಷ್ಠರು, ಶಾಸಕರಿಗೆ ಬಿಟ್ಟಿದ್ದು. ಅವರಾಗಿಯೇ ನಮ್ಮನ್ನ ಕೇಳಿದರೆ ಸ್ವಾಮೀಜಿಗಳಾದವರು, ಧರ್ಮಗುರುಗಳಾದ ನಾವು ಸಲಹೆ ಕೊಡಬೇಕು. ಆದರೆ ಸರ್ಕಾರದ ಆಂತರಿಕ ವಿಚಾರದಲ್ಲಿ ಕೈ ಹಾಕಬಾರದು ಎಂದರು.

'ಸಿದ್ದರಾಮಯ್ಯ ಬದಲಿಗೆ ನನ್ನನ್ನೇ ಸಿಎಂ ಮಾಡಿ' ಎಂದ ಭೂಪ!

ನಾವು ಮೀಸಲಾತಿಗಾಗಿ ಪಾದಯಾತ್ರೆ ಆರಂಭಿಸುವ ಮೊದಲು. ನಮ್ಮವರು ಮಂತ್ರಿ ಆಗಬೇಕು, ಮುಖ್ಯಮಂತ್ರಿ ಅಗಬೇಕು ಅಂತ ಹೇಳಿದ್ದೆವು. ಆದ್ರೆ ಈಗ ನಮಗೆ ಮಂತ್ರಿ, ಮುಖ್ಯಮಂತ್ರಿಗಿಂತ ಮೀಸಲಾತಿ ಮುಖ್ಯವಾಗಿದೆ. ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಿಕೊಡಿ ಅನ್ನೋದೇ ನಮ್ಮ ಒತ್ತಾಯ. ಆದ್ರೆ ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಯಾರನ್ನಾದ್ರೂ ಸಿಎಂ, ಡಿಸಿಎಂ ಮಾಡಿ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸಾಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!