ಶಿವಮೊಗ್ಗ: ಜಿಪಂ ಕೆಡಿಪಿ ಸಭೆಯಲ್ಲಿ ದಿಡೀರ್ ಅಸ್ವಸ್ಥರಾದ ಸಿಎಂ ರಾಜಕೀಯ ಕಾರ್ಯದರ್ಶಿ!

Published : Nov 30, 2024, 10:26 PM IST
ಶಿವಮೊಗ್ಗ: ಜಿಪಂ ಕೆಡಿಪಿ ಸಭೆಯಲ್ಲಿ ದಿಡೀರ್ ಅಸ್ವಸ್ಥರಾದ ಸಿಎಂ ರಾಜಕೀಯ ಕಾರ್ಯದರ್ಶಿ!

ಸಾರಾಂಶ

ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಮಹಿಳಾ ಅಧಿಕಾರಿ ಬಿ ಬಿ. ಕಾವೇರಿ ಅಸ್ವಸ್ಥರಾದ ಘಟನೆ ನಡೆದಿದೆ.

ಶಿವಮೊಗ್ಗ (ನ.30): ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಮಹಿಳಾ ಅಧಿಕಾರಿ ಬಿ ಬಿ. ಕಾವೇರಿ ಅಸ್ವಸ್ಥರಾದ ಘಟನೆ ನಡೆದಿದೆ.

ಇಂದು ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕೆಡಿಪಿ ಸಭೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರಿಂದ ಸಭೆಗೆ ಹಾಜರಾಗಿದ್ದ ಮಹಿಳಾ ಅಧಿಕಾರಿ. ಸಭೆ ನಡೆಯುತ್ತಿರುವಾಗಲೇ ದಿಡೀರ್ ಕುಳಿತ ಆಸನದಲ್ಲಿ ನಿತ್ರಾಣಗೊಂಡು ಕಣ್ಣುಮುಚ್ಚಿದ ಅಧಿಕಾರಿ ಕಾವೇರಿ. ಈ ಘಟನೆಯಿಂದ ಕೆಲಕಾಲ ಸಭೆಯಲ್ಲಿ ಗಾಬರಿ ಹುಟ್ಟಿಸಿತು. ಇದೇ ವೇಳೆ ಸಭೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಹಾಗೂ ವೈದ್ಯರಾದ ಧನಂಜಯ ಸರ್ಜಿ ನೆರವಿಗೆ ಧಾವಿಸಿದರು. ವಾಂತಿ, ತಲೆಸುತ್ತು ಬಂದಂತಾಗಿದ್ದರಿಂದ ತಕ್ಷಣವೇ ವೈದ್ಯ ಧನಂಜಯ್ ಸರ್ಜಿ ಆರೈಕೆಗೆ ಮುಂದಾದರು.

ಸೋತ ನೆಲದಲ್ಲೇ ಗೆಲ್ತೇನೆ, ಅಲ್ಲಿವರೆಗೆ ಸುಮ್ಮನೆ ಕೂರೊಲ್ಲ: ನಿಖಿಲ್ ಕುಮಾರಸ್ವಾಮಿ ಶಪಥ!

ಬಳಿಕ ಸಭೆಯಿಂದ ಅವರನ್ನು ಹೊರಗಡೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅನಂತರವೇ ಸುಧಾರಿಸಿಕೊಂಡರು. 'ಫುಡ್ ಪಾಯ್ಸನಿಂಗ್‌ ಆದ ಹಿನ್ನೆಲೆ ಮಹಿಳಾ ಅಧಿಕಾರಿ ಕಾವೇರಿ ಮೇಡಂ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಬೆಳಗ್ಗೆ 11 ಗಂಟೆಗೆ ಆರಂಭವಾಗ ಬೇಕಿದ್ದ ಜಿಪಂ ಕೆಡಿಪಿ ಸಭೆ ಮಧ್ಯಾಹ್ನ 1.30 ರ ವೇಳೆಗೆ ಆರಂಭಗೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು