ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಸುಳಿವು ನೀಡಿದ ಸಿಎಂ!

Published : Sep 20, 2024, 01:38 PM IST
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಸುಳಿವು ನೀಡಿದ ಸಿಎಂ!

ಸಾರಾಂಶ

ಗಣೇಶ ಮೂರ್ತಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ. ಇದುವರೆಗೆ ಎರಡು ಪ್ರಕರಣಗಳು ನಡೆದಿವೆ. ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು (ಸೆ.20):  ಗಣೇಶ ಮೂರ್ತಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ. ಇದುವರೆಗೆ ಎರಡು ಪ್ರಕರಣಗಳು ನಡೆದಿವೆ. ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಗಮಂಗಲ ಘಟನೆ ತಡೆಯುವಲ್ಲಿ ಪೊಲೀಸರು ವೈಫಲ್ಯ ಹಿನ್ನೆಲೆ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಎರಡು ಘಟನೆಗಳ ಹೊರತು ಎಲ್ಲ ಶಾಂತಿಯುತವಾಗಿ ನಡೆದಿದೆ ಎಂದರು.

ರಾಜ್ಯದಲ್ಲಿ ವರ್ಷವಿಡೀ ಕನ್ನಡ ಜನೋತ್ಸವ ಸಂಭ್ರಮ: ಸಿದ್ದರಾಮಯ್ಯ

ಇನ್ನು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿನೋಟಿಫಿಕೇಷನ್ ಸಂಬಂಧ ದಾಖಲೆಗಳನ್ನ ನಿನ್ನೆ ಸಚಿವರು ಬಿಡುಗಡೆ ಮಾಡಿದ್ದಾರೆ. ನಾನು ಆ ದಾಖಲೆಗಳನ್ನ ನೋಡುತ್ತೇನೆ. ಆ ಭೂಮಿ ಕುಮಾರಸ್ವಾಮಿ ಭಾಮೈದನಿಗೆ ರಿಜಿಸ್ಟರ್ ಮಾಡಲಾಗಿದೆ. ಅತ್ತೆಗೆ ಹಲವಾರು ಜಿಪಿಎ ಮಾಡಿಕೊಟ್ಟಿದ್ದಾರೆ. ಇದು ಬಹಳ ಗಂಭೀರವಾದ ಪ್ರಕರಣವಾಗಿದೆ. ನೋಡೊಣಾ ಆ ಫೈಲನ್ನ ತರಿಸಿ ಪರಿಶೀಲನೆ ಮಾಡುತ್ತೇನೆ. ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ತಮ್ಮ ಮೇಲಿನ ಎಲ್ಲಾ ಆರೋಪಗಳು ಹಿಟ್ ಅಂಡ್ ರನ್ ರೀತಿ ಮಾಡಿ ಹೋಗುತ್ತಾರೆ ಎಂದರು.

ಬೆಂಗ್ಳೂರಿನ ಏರಿಯಾವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ಜಡ್ಜ್: ವಿವರಣೆ ಕೇಳಿದ ಸುಪ್ರೀಂ!

ಇನ್ನು ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಮಾಡಲು ಸಚಿವರು, ಶಾಸಕರು ಪತ್ರ ಕೊಟ್ಟಿದ್ದಾರೆ. ಮುನಿರತ್ನ ವಿರುದ್ದ ಬಹಳಷ್ಟು ಗಂಭೀರ ಪ್ರಕರಣಗಳು ಇವೆ. ಹೀಗಾಗಿ ವಿಶೇಷ ತನಿಖಾ ತಂಡದ ಅಗತ್ಯವಿದೆ ಎಂದಿದ್ದಾರೆ. ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವಂತೆ ಗೃಹಸಚಿವರಿಗೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌