ಶಿರಾಡಿ ಸುರಂಗಕ್ಕೆ ಸಮ್ಮತಿಸಿ: ಗಡ್ಕರಿಗೆ ಸಿದ್ದು ಮನವಿ

Published : Jun 29, 2024, 08:23 AM ISTUpdated : Jun 29, 2024, 08:48 AM IST
ಶಿರಾಡಿ ಸುರಂಗಕ್ಕೆ ಸಮ್ಮತಿಸಿ: ಗಡ್ಕರಿಗೆ ಸಿದ್ದು ಮನವಿ

ಸಾರಾಂಶ

ರಾಜ್ಯದಲ್ಲಿ ಬೆಳಗಾವಿ-ಹುನಗುಂದ- ರಾಯಚೂರು, ಬೆಂಗಳೂರು ಚೆನ್ನೈ, ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದರು. 

ನವದೆಹಲಿ(ಜೂ.29):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ತೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಬೆಳಗಾವಿ-ಹುನಗುಂದ- ರಾಯಚೂರು (ಫೆಬ7489), ಬೆಂಗಳೂರು ಚೆನ್ನೈ, ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಇದೇ ವೇಳೆ ಕೃತಜ್ಞತೆ ಸಲ್ಲಿಸಿದ ಅವರು, ಹಲವು ಯೋಜನೆಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.

ದೇಶಾದ್ಯಂತ ಇಂದಿನಿಂದ ಟೋಲ್‌ ದರ ಶೇ.5 ಹೆಚ್ಚಳ, ಚುನಾವಣೆ ಕಾರಣ 2 ತಿಂಗಳ ಬಳಿಕ ಜಾರಿ!

ರಾಜ್ಯದಲ್ಲಿ 5225 ಕಿ.ಮೀ. ಉದ್ದದ ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಆ ಕುರಿತು ಕ್ರಮ ಕೈಗೊಳ್ಳುವಂತೆ ಕೋರಿದರು.

ಏನೇನು ಪ್ರಸ್ತಾವನೆ?: 

ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸುವುದು, ಶಿರಾಡಿ ಘಾಟಿಯಲ್ಲಿ ಮಾರನ ಹಳ್ಳಿಯಿಂದ ಅಡ್ಡಹೊಳೆ ನಡುವೆಸುರಂಗನಿರ್ಮಿಸುವ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು, ಬೆಳಗಾವಿಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವುದು. ಬೇಲೂರು- ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥವಾಗಿ ಪರಿವರ್ತನೆ, ರಾಷ್ಟ್ರೀಯ ಹೆದ್ದಾರಿ ಘವಿ-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವುದು, ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲೆಟ್ಟದಿಂದ ಮಾನಂದವಾಡಿ, ಹೆಚ್.ಡಿ. ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ-ಯರಗಟ್ಟಿ-ಮನ್ನಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 8. ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವುದು ಸೇರಿದಂತೆ ಹಲವು ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾಜನ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್