ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

Published : May 04, 2025, 04:25 AM ISTUpdated : May 04, 2025, 05:59 AM IST
ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು (ಮೇ.4): ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಯಲಹಂಕ ಮಿನಿ ವಿಧಾನಸೌಧ ಎದುರು 14 ಅಡಿ ಎತ್ತರದ ಡಾ। ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಮ್ಮ ದೇಶ, ಸಮಾಜಕ್ಕೆ ಬೇಕಾಗಿದ್ದ ಅತ್ಯುತ್ತಮ ಸಂವಿಧಾನವನ್ನು ಅಂಬೇಡ್ಕರ್ ನೀಡಿದರು. ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯನ್ನು ಅವರು ಅರ್ಥ ಮಾಡಿಕೊಂಡಷ್ಟು ಬೇರೆಯವರು ಮಾಡಿಕೊಂಡಿಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದರು.

ಇದನ್ನೂ ಓದಿ: ಕಾಂಗ್ರೆಸ್‌ನಿಂದ ತಾಲಿಬಾನ್‌ ಸರ್ಕಾರ ಬರುತ್ತೆ ಎಂಬ ಮಾತು ಸತ್ಯ: ಪ್ರತಾಪ ಸಿಂಹ

ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೆ ಉಳಿಯುವುದು ಜಾತಿ ಮಾತ್ರ. ಇದನ್ನು ಮನಗಂಡಿದ್ದ ಅಂಬೇಡ್ಕರ್, ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿಕ ಶಾಸಕ ವಿಶ್ವನಾಥ್ ಹೇಳಿಕೆಯನ್ನು ಸ್ವಾಗತಿಸಿದ ಮುಖ್ಯಮಂತ್ರಿಯವರು, ಯಲಹಂಕದಲ್ಲಿ ದಲಿತರು ಹಿಂದುಳಿದವರೇ ಹೆಚ್ಚಿದ್ದಾರೆ. ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸವನ್ನು ವಿಶ್ವನಾಥ್ ಮಾಡುತ್ತಿದ್ದಾರೆ. ಈ ಕ್ಷೇತ್ರಕ್ಕೆ ಕೋರಿರುವ ಅನುದಾನದ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಸಮಗ್ರ ಸಾಮಾಜಿಕ ವ್ಯವಸ್ಥೆ ಬದಲಾಗಬೇಕು. ಅಂಬೇಡ್ಕರ್ ದಲಿತರಾಗಿ ಹುಟ್ಟಿದರೂ ಎಲ್ಲರ ನಾಯಕರಾಗಿದ್ದರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ನಾಯಕರಾಗಿದ್ದರು. ಈ ದೇಶದಲ್ಲಿ ಅವರು ಹುಟ್ಟಿರುವುದೇ ನಮಗೆ ಹೆಮ್ಮೆಯ ಸಂಗತಿ. ಅಂಬೇಡ್ಕರ್ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿಮೆಗಳು ಸಂಕೇತಗಳಾದರೂ, ಇವುಗಳಿಂದ ಅಂಬೇಡ್ಕರ್ ಅವರ ವಿಚಾರಗಳು ಇನ್ನಷ್ಟು ಪಸರಿಸಲಿವೆ ಎಂದು ತಿಳಿಸಿದರು.

ಇದನ್ನೂ ಓದಿ:  ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಆರ್.ಸೀತಾರಂ ಹಾಗೂ ನಸೀರ್ ಅಹ್ಮದ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌