
ರಾಮನಗರ (ಅ.23): ಯತೀಂದ್ರ ಸಿದ್ದರಾಮಯ್ಯ ಈ ರೀತಿ ಹೇಳಿಕೆಗಳನ್ನ ಕೊಡಬಾರದು. ಗೌರವಯುತ ಹೇಳಿಕೆ ಕೊಡಬೇಕು. ತಾವು ದೊಡ್ಡ ಮನೆತನದಲ್ಲಿ, ದೊಡ್ಡ ಸ್ಥಾನದಲ್ಲಿದ್ದೀರಿ, ತಾವಾಗಿ ಕೆಳಗಡೆ ಬಿಳೋದು ನಮಗೆ ಇಷ್ಟವಿಲ್ಲ. ಈ ವಿಷಯವಾಗಿ ನನ್ನ ಮೌನವೇ ಉತ್ತರ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಬಳಿಕ ಸತೀಶ್ ಜಾರಕಿಹೊಳಿಗೆ ಸಿಎಂ ಜವಾಬ್ದಾರಿ ಎಂಬ ಯತೀಂದ್ರ ಹೇಳಿಕೆ ವಿಚಾರವಾಗಿ ಇಂದು ರಾಮನಗರದಲ್ಲಿ ಅಂಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರೀತಿ ಎಳಸು ಸ್ಟೇಟ್ಮೆಂಟ್. ನಿಮ್ಮ ಮಾತು ಇನ್ನೂ ಬಲಿತಿಲ್ಲ, ನಿಮ್ಮ ಮಾತಲ್ಲಿನ್ನೂ ಶಕ್ತಿ ಇಲ್ಲ. ಯಾವುದೇ ರೀತಿ ಗೊಂದಲ ಸೃಷ್ಟಿಬಾರದು ಎಂದರು.
ಕೆಪಿಸಿಸಿಯಿಂದ ಯತೀಂದ್ರಗೆ ನೋಟಿಸ್ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ನಾವು ಮಾಡಿದ್ರೆ ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಅನ್ನೋ ಪರಿಸ್ಥಿತಿಯಿದೆ. ಅವೆಲ್ಲವನ್ನೂ ಹೇಳಬಾರದುದ, ಅವರು ತಿದ್ದಿಕೊಳ್ತಾರೆ ಎಂದರು.
ಇನ್ನು ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಇಕ್ಬಾಲ್ ಹುಸೇನ್, ಅವ್ರು ಪಕ್ಷದ ಅಧ್ಯಕ್ಷರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಕೆಲಸ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚು ಶ್ರಮ ಹಾಕುತ್ತಿದ್ದಾರೆ.ನಮಗೆಲ್ಲ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಯೂತ್ ಕಾಂಗ್ರೆಸ್ನಿಂದ ಬಂದು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಯಾರೂ ಗೊಂದಲದ ಹೇಳಿಕೆ ಕೊಡಬಾರದು. ಅದನ್ನು ಅವರು ತಿದ್ದಿಕೊಳ್ತಾರೆ ಎಂಬ ವಿಶ್ವಾಸವಿದೆ ಎಂದು ಯತೀಂದ್ರ ಹೇಳಿಕೆ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ