
ಬಳ್ಳಾರಿ, (ಜುಲೈ.09): ರಾಜೀನಾಮೆ ನೀಡಿ ಪ್ರತಿಭಟನೆಗೆ ಮುಂದಾಗಿದ್ದ ಗುತ್ತಿಗೆ ವೈದ್ಯರ ಖಾಯಮಾತಿಗೆ ಇಂದು (ಗುರುವಾರ) ನಡೆದ ಸಂಪುಟ ಸಭೆಯಲ್ಲಿ ಷರತ್ತುಬದ್ಧ ಒಪ್ಪಿಗೆ ನೀಡಿದೆ. ಇದರ ಬೆನ್ನಲ್ಲೇ ಗುತ್ತಿಗೆ ಆಯುಷ್ ವೈದ್ಯರು ಎದ್ದು ನಿಂತಿದ್ದಾರೆ.
ಹೌದು... ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 2 ಸಾವಿರ ಆಯುಷ್ ವೈದ್ಯರೆಲ್ಲರೂ ಜು.15ರಂದು ಸಾಮೂಹಿಕವಾಗಿ ರಾಜಿನಾಮೆ ನೀಡಲಿದ್ದಾರೆ ಎಂದು ಗುತ್ತಿಗೆ ಆಯುಷ್ ವೈದ್ಯರ ಸಂಘದ ರಾಜ್ಯ ಘಟಕದ ಖಜಾಂಚಿ ಡಾ.ಆನಂದ್ ಎಸ್.ಕಿರಿಶ್ಯಾಳ ತಿಳಿಸಿದರು.
ಗುತ್ತಿಗೆ ವೈದ್ಯರಿಗೆ ಗುಡ್ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!
ಬಳ್ಳಾರಿಯಲ್ಲಿ ಇಂದು (ಗುರುವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 15-20 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರೂ ಕಾಯಂಗೊಳಿಸಿಲ್ಲ. ವೇತನದಲ್ಲಿಯೂ ತಾರತಮ್ಯ ನಡೆಯುತ್ತಿದೆ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಸಿದಿರು.
ಅಲೋಪತಿ ವೈದ್ಯರ ಬೇಡಿಕೆಗಳನ್ನು ಮಾತ್ರ ಈಡೇರಿಸಿ ಅವರ ವೇತನವನ್ನು ಹೆಚ್ಚಿಸಿ, ಆಯುಷ್ ವೈದ್ಯರನ್ನು ಸರ್ಕಾರ ಕಡೆಗಣಿಸಿದೆ. ಖಾಸಗಿ ವೈದ್ಯರು ಕೂಡ ಹೊರರೋಗಿಗಳ ಚಿಕಿತ್ಸೆಯನ್ನು ಹಂತಹಂತವಾಗಿ ಸ್ಥಗಿತಗೊಳಿಸಲಿದ್ದಾರೆ. ಜ್ವರ ತಪಾಸಣಾ ಕೇಂದ್ರಗಳಲ್ಲಿ ಬಹುತೇಕ ಆಯುಷ್ ಮತ್ತು 27 ಸಾವಿರ ಖಾಸಗಿ ವೈದ್ಯರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
1 ತಿಂಗಳೊಳಗೆ ಗುತ್ತಿಗೆ ವೈದ್ಯರು ಕಾಯಂ, ಮುಷ್ಕರ ನಿಲ್ಲಿಸಿ ವೈದ್ಯರು ಇಂದು ಕೆಲಸಕ್ಕೆ ಹಾಜರ್
ಈಗಿನ ಕಾಲದಲ್ಲಿ ಕೇವಲ 20 ಸಾವಿರದಲ್ಲಿ ಜೀವನ ನಡೆಯುವುದು ಕಷ್ಟಕರವಾಗಿದೆ. ಕನಿಷ್ಠ 58,500 ರೂ. ವೇತನ ಪಾವತಿಸಬೇಕು. ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಮೌಖಿಕ ಭರವಸೆ ನೀಡಿದರೆ ಈ ಬಾರಿ ಒಪ್ಪುವುದಿಲ್ಲ. ಲಿಖಿತವಾಗಿ ಬೇಡಿಕೆಗಳನ್ನು ಈಡೇರಿಸಿದ ನಂತರವೇ ಸೇವೆ ಮುಂದುವರೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪ್ರಕಾಶ ಪಾಟೀಲ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಆಯುಶ್ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೀವನೇಶ್ವರಯ್ಯ, ಡಾ.ಬಸವರಾಜ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ