
ಬೆಂಗಳೂರು, (ಆಗಸ್ಟ್.3): ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಚೇತರಿಕೆಯ ಪ್ರಮಾಣ ಹೆಚ್ಚಾಗಿರುವುದು ಹೊಸ ಆಶಾ ಭಾವನೆ ಮೂಡಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಚೇತರಿಕೆ ಪ್ರಮಾಣದ ಅಂಕಿ-ಅಂಶಗಳ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಗುಣಮುಖರಾಗುವವರ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಜುಲೈ 27ರಿಂದ ಆಗಸ್ಟ್ 2ರ ವರೆಗಿನ ಅಂಕಿ ಅಂಶಗಳನ್ನು ಹಂಚಿಕೊಂಡಿರುವ ಸುಧಾಕರ್, ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.5.67ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.
ಬೆಂಗಳೂರಲ್ಲಿ ಕೊರೋನಾಗೆ ಮಧ್ಯವಯಸ್ಕರೆ ಹೆಚ್ಚು ಬಲಿ: ಹೆಚ್ಚಿದ ಆತಂಕ
ಕಳೆದ ವಾರ ಶೇ.37.14ರಷ್ಟು ಮಂದಿ ಗುಣಮುಖರಾಗಿದ್ದರು, ಆಗಸ್ಟ್ 2ರ ಅಂಕಿ ಅಂಶಗಳ ಪ್ರಕಾರ ಶೇ.42.81ರಷ್ಟು ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲೂ ಶೇ.9.17ರಷ್ಟು ಹೆಚ್ಚು ಮಂದಿ ಚೇತರಿಕೆ ಕಂಡಿದ್ದಾರೆ.
ಕಳೆದ ವಾರ 27.97ರಷ್ಟು ಮಂದಿ ಗುಣಮುಖರಾಗಿದ್ದರೆ, ನಿನ್ನೆ (ಆ.2) ಶೇ.35.14ರಷ್ಟು ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಮಂದಿ ಸೋಂಕು ಪೀಡಿತರಾಗುತ್ತಿದ್ದಾರೆ. ಆ ಆತಂಕದ ನಡುವೆ ಚೇತರಿಕೆ ದರ ಏರಿಕೆಯಾಗಿರುವುದು ಸಮಾಧಾನದ ಸಂಗತಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ