ಕರ್ನಾಟಕದಲ್ಲಿ ಕೊರೋನಾ ಪಾಸಿವಿಟಿವಿ ಪ್ರಮಾಣ ಇಳಿಕೆ, ಕೊಂಚ ನಿರಾಳ ಭಾವ

Published : Jun 01, 2021, 08:07 PM IST
ಕರ್ನಾಟಕದಲ್ಲಿ ಕೊರೋನಾ ಪಾಸಿವಿಟಿವಿ ಪ್ರಮಾಣ ಇಳಿಕೆ, ಕೊಂಚ ನಿರಾಳ ಭಾವ

ಸಾರಾಂಶ

* ರಾಜ್ಯದಲ್ಲಿ ಕೊರೋನಾ ಪಾಸಿವಿಟಿವಿ ಪ್ರಮಾಣ ಇಳಿಕೆ * ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಳ * ರಾಜ್ಯದ ಜನತೆಯಲ್ಲಿ ಕೊಂಚ ನಿರಾಳ ಭಾವ

ಬೆಂಗಳೂರು, (ಜೂನ್.01): ರಾಜ್ಯದಲ್ಲಿ ಕೊರೋನಾ ಪಾಸಿವಿಟಿವಿ ಪ್ರಮಾಣ ಇಳಿಕೆಯಾಗುತ್ತಿದೆ. ಇದರ ಜತೆಗೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿರುವುದು ಕೊಂಚ ನಿರಾಳ ಭಾವ ಮೂಡಿಸಿದೆ.

ಇಂದು (ಮಂಗಳವಾರ) 14304 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು,  464  ಜನರು ಸಾವನ್ನಪ್ಪಿದ್ದಾರೆ. ಇನ್ನು ಒಂದೇ ದಿನ 29271 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಚೇತರಿಕೆ ಹಾದಿಗೆ ಕರ್ನಾಟಕ,  44473 ಡಿಸ್ಚಾರ್ಜ್, ಪಾಸಿಟಿವಿಟಿ ದರ ಶೇ. 13.5ಕ್ಕೆ ಇಳಿಕೆ

ಇದರೊಂದಿಗೆ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2,6187,35 ಆಗಿದ್ರೆ, ಈವರೆಗೆ ಗುಣಮುಖರಾದವರೆ ಸಂಖ್ಯೆ 22,90,861 ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  

ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 15,304ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,98,299ಕ್ಕೆ ಇಳಿಕೆಯಾಗಿದೆ. ಇದರಿಂದ ಪಾಸಿಟಿವಿಟಿ ಪ್ರಮಾಣ ಶೇ.12.30ಕ್ಕೆ ಇಳಿಕೆಯಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 3418 ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 276 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ 
ಬಾಗಲಕೋಟೆ-217, ಬಳ್ಳಾರಿ-399, ಬೆಳಗಾವಿ-891, ಬೆಂಗಳೂರು ಗ್ರಾಮಾಂತರ-202, ಬೆಂಗಳೂರು ನಗರ-3418, ಬೀದರ್-22, ಚಾಮರಾಜನಗರ-80, ಚಿಕ್ಕಬಳ್ಳಾಪುರ-152, ಚಿಕ್ಕಮಗಳೂರು-504, ಚಿತ್ರದುರ್ಗ-637, ದಕ್ಷಿಣ ಕನ್ನಡ-536, ದಾವಣಗೆರೆ-178, ಧಾರವಾಡ-267, ಗದಗ-214, ಹಾಸನ-1127, ಹಾವೇರಿ-219, ಕಲಬುರಗಿ-82, ಕೊಡಗು-162, ಕೋಲಾರ-338, ಕೊಪ್ಪಳ-272, ಮಂಡ್ಯ-337, ಮೈಸೂರು-1153, ರಾಯಚೂರು-133, ರಾಮನಗರ-138, ಶಿವಮೊಗ್ಗ-520, ತುಮಕೂರು-769, ಉಡುಪಿ-735, ಉತ್ತರ ಕನ್ನಡ-332, ವಿಜಯಪುರ-163, ಯಾದಗಿರಿ-107.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ