
ಬೆಂಗಳೂರು, (ಮೇ.30): ಕರ್ನಾಟಕದಲ್ಲಿ ಇಂದು (ಭಾನುವಾರ) ಒಂದೇ ದಿನ 20,378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 382 ಜನರು ನಿಧನರಾಗಿದ್ದಾರೆ.
ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ. ಜತೆಗೆ ರಾಜ್ಯದಲ್ಲಿ ಇದುವರೆಗೆ ಕೊರೋನಾದಿಂದ 28,679 ಜನರು ಸಾವನ್ನಪ್ಪಿದ್ದಾರೆ.
ದೇಶದಲ್ಲಿ ತಗ್ಗಿದ ಕೊರೋನಾ: ಕೊಂಚ ಸಮಾಧಾನ
ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾನುವಾರ 4,734 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 213 ಜನರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 28,053 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 22,17,117 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 3,42,010 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-193, ಬಳ್ಳಾರಿ-598, ಬೆಳಗಾವಿ-1171, ಬೆಂಗಳೂರು ಗ್ರಾಮಾಂತರ-392, ಬೆಂಗಳೂರು ನಗರ-4734, ಬೀದರ್-37, ಚಾಮರಾಜನಗರ-402, ಚಿಕ್ಕಬಳ್ಳಾಪುರ-356, ಚಿಕ್ಕಮಗಳೂರು-671, ಚಿತ್ರದುರ್ಗ-805, ದಕ್ಷಿಣ ಕನ್ನಡ -727, ದಾವಣಗೆರೆ-698, ಧಾರವಾಡ-525, ಗದಗ-289, ಹಾಸನ-2227, ಹಾವೇರಿ-206, ಕಲಬುರಗಿ-107, ಕೊಡಗು-271, ಕೋಲಾರ್-341, ಕೊಪ್ಪಳ-365, ಮಂಡ್ಯ-643, ಮೈಸೂರು-1559, ರಾಯಚೂರು-278, ರಾಮನಗರ-164, ಶಿವಮೊಗ್ಗ-386, ತುಮಕೂರು-773, ಉಡುಪಿ- 651, ಉತ್ತರ ಕನ್ನಡ-504, ವಿಜಯಪುರ-198, ಯಾದಗಿರಿ-107.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ