
ದಾವಣಗೆರೆ (ಜುಲೈ.27): ಕರ್ನಾಟಕದಲ್ಲಿ ದಲಿತ ಸಿಎಂಗಾಗಿ ಬಹಳ ದಿನಗಳಿಂದ ಕೂಗು ಕೇಳಿಬರುತ್ತಿದೆ. ಈ ದಿಶೆಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಸಹಜವಾಗಿ ನಾನು ಆ ಮಾತು ಹೇಳಿದ್ದೇನೆ ಎಂದು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ದಲಿತ ಸಿಎಂಗೆ ಸಂಬಂಧಿಸಿದಂತ ಮಾಧ್ಯಮಗಳೊಂದಿಗೆ ಮಾತನಾಡಿದ ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಅವರು ನಾಳೆ ಯಾರು ಇರ್ತಾರೆ ಎಂದು ಖಚಿತವಾಗಿ ಹೇಳಲಾಗದು. ಶರಣರ ಮಾತಿನಂತೆ, ‘ನುಡಿದಂತೆ ನಡೆ, ಇದೇ ಜನ್ಮ ಕಡೆ’ ಎಂಬಂತೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ. ಪಕ್ಷ ಮೊದಲು, ನಂತರ ಉಳಿದೆಲ್ಲ ಎಂದರು.
ಕರ್ನಾಟಕ ದಲಿತ ಸಿಎಂ ತೀರ್ಮಾನ ಹೈಕಮಾಂಡನದ್ದೇ:
ದಲಿತ ಸಿಎಂ ಬಗ್ಗೆ ನಾನು ಮಾತನಾಡಿದ್ದು ಸಹಜ, ಆದರೆ ತೀರ್ಮಾನ ಹೈಕಮಾಂಡ್ದೇ. ಅಧಿಕಾರ ಹಂಚಿಕೆ ನನ್ನ ಕೈಯಲ್ಲಿ ಇಲ್ಲ. ಸದ್ಯಕ್ಕಂತೂ ಸಿಎಂ ಖುರ್ಚಿ ಖಾಲಿಯೂ ಇಲ್ಲ. ಮುಂದೆ ಖಾಲಿಯಾದಾಗ ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಯಾರ ವಿರೋಧವಾಗಿಯೂ, ಬೆಂಬಲಕ್ಕೂ ನಿಂತಿಲ್ಲ. ಇರೋದನ್ನು ಹೇಳಿದ್ದೇನೆ ಎಂದರು. ಇದೇ ವೇಳೆ ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ದೇವೇಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಹೇಳಿಕೆಯಿಂದ ಕರ್ನಾಟಕ ರಾಜಕೀಯದಲ್ಲಿ ದಲಿತ ಸಿಎಂ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ನ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ