ಕೆಂಪು ಈರುಳ್ಳಿ ರಫ್ತು ನಿಷೇಧ ತೆರವು: ಕೇಂದ್ರಕ್ಕೆ ಥ್ಯಾಂಕ್ಸ್ ಎಂದ್ರು ಡಿಸಿಎಂ

By Kannadaprabha NewsFirst Published Oct 30, 2019, 8:27 AM IST
Highlights

ಕೆಂಪು ಈರುಳ್ಳಿ ರಫ್ತು ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ ಧನ್ಯವಾದ ಅರ್ಪಿಸಿದ್ದಾರೆ. ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು.

ಬೆಂಗಳೂರು(ಅ.30): ಕೆಂಪು ಈರುಳ್ಳಿ ರಫ್ತು ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ ಧನ್ಯವಾದ ಅರ್ಪಿಸಿದ್ದಾರೆ.

ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಕೆಂಪು ಈರುಳ್ಳಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಮನವಿಗೆ ಕೇಂದ್ರ ಸ್ಪಂದಿಸಿ ನ.30ರ ವರೆಗೆ 9 ಸಾವಿರ ಟನ್‌ವರೆಗೆ ರಫ್ತಿಗೆ ಅವಕಾಶ ನೀಡಿದೆ. ಇದರಿಂದ ರಾಜ್ಯದ ಈರುಳ್ಳಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠೆಯಾದ ಮೆಡಿಕಲ್ ಕಾಲೇಜ್: ಡಿಕೆಶಿಗೆ ಡಿಚ್ಚಿ ಕೊಡಲು ಸುಧಾಕರ್ ಮೈಲೇಜ್

ಕೆಂಪು ಗುಲಾಬಿ ಈರುಳ್ಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದು, ರಫ್ತು ನಂಬಿಯೇ ರಾಜ್ಯದ ರೈತರು ಈ ಬೆಳೆ ಬೆಳೆಯುತ್ತಿದ್ದಾರೆ. ಆದ್ದರಿಂದ ರಫ್ತಿಗೆ ಯಾವುದೇ ನಿರ್ಬಂಧ ವಿಧಿಸದೆ ರೈತರ ನೆರವಿಗೆ ಧಾವಿಸಬೇಕು. ಅಲ್ಲದೆ, ಈರುಳ್ಳಿ ರಫ್ತಿಗೆ ವಿನಾಯಿತಿ ಪಡೆಯಲು ಕೇಂದ್ರ ವಾಣಿಜ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ಕೊಳೆತ ತರಕಾರಿ: ತಾಜ್‌ ವೆಸ್ಟ್‌ಎಂಡ್‌ಗೆ ದಂಡ.

click me!