ಪೆನ್‌ಡ್ರೈವ್‌ ಪ್ರಕರಣ: 100 ಕೋಟಿ ಆಮಿಷದ ಬಗ್ಗೆ ಬೇಕಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ, ಡಿ.ಕೆ.ಶಿವಕುಮಾ‌ರ್

Published : May 19, 2024, 07:45 AM IST
ಪೆನ್‌ಡ್ರೈವ್‌ ಪ್ರಕರಣ: 100 ಕೋಟಿ ಆಮಿಷದ ಬಗ್ಗೆ ಬೇಕಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ, ಡಿ.ಕೆ.ಶಿವಕುಮಾ‌ರ್

ಸಾರಾಂಶ

'ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಆತ ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನೀವು ಮಾಧ್ಯಮ ದವರುಯಾರೋ ಏನೋ ಹೇಳುತ್ತಾರೆ ಎಂದು ಇಂತಹ ವಿಚಾರ ಹಾಕಿಕೊಂಡು ಕೂತರೆ ನಿಮ್ಮ ಘನತೆ ಏನಾಗಬೇಕು? ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ?' ಎಂದು ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ 

ಬೆಂಗಳೂರು(ಮೇ.19): ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಮೇಲೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಅಷ್ಟೇ ಹೊರತು ಮಾನಸಿಕ ಸಮಸ್ಯೆ ಎದುರಿಸುತ್ತಿರುವ ದೇವರಾಜೇಗೌಡನಂತಹ ಮೆಂಟಲ್ ಗಿರಾಕಿಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. `ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ 100 ಕೋಟಿ ಆಮಿಷ ಒಡ್ಡಿರುವುದಾಗಿ ಆರೋಪಿಸಿರುವ ದೇವರಾಜೇಗೌಡ ಹೇಳಿಕೆಗೆ ಈ ರೀತಿ ತೀಕ ತೀಕ್ಷ್ಯ ಪ್ರತಿಕ್ರಿಯೆ ನೀಡಿದರು.

'ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಆತ ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನೀವು ಮಾಧ್ಯಮ ದವರುಯಾರೋ ಏನೋ ಹೇಳುತ್ತಾರೆ ಎಂದು ಇಂತಹ ವಿಚಾರ ಹಾಕಿಕೊಂಡು ಕೂತರೆ ನಿಮ್ಮ ಘನತೆ ಏನಾಗಬೇಕು? ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ?' ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆ ಸೇರಬೇಕಾದವರ ಮಾತಿಗೆ ಇಷ್ಟು ಪ್ರಾಮುಖ್ಯತೆ ನೀಡುವುದು ಸರಿಯಲ್ಲ. ಆತನೊಬ್ಬ ಮೆಂಟಲ್ ಗಿರಾಕಿ' ಎಂದರು.

ಪೆನ್‌ಡ್ರೈವ್‌ ಕೇಸಿಗೆಂದೇ ಡಿಕೆಶಿಯಿಂದ 4 ಸಚಿವರ ತಂಡ: ದೇವರಾಜೇಗೌಡ

'ಆ ವ್ಯಕ್ತಿ ಜತೆ ನೀವು ಮಾತನಾಡಿರುವುದಕ್ಕೆ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿವೆ. ನಾನು ಆ ವ್ಯಕ್ತಿ ಜತೆ ವಿಶೇಷವಾಗಿ ಮಾತನಾ ಡಿಲ್ಲ. ನಾನು ಡಿಸಿಎಂ. ನೂರಾರು ಜನ ಬಂದು ನಮ್ಮನ್ನು ಸಂಪರ್ಕಿಸುತ್ತಾರೆ. ಒಳ್ಳೆಯವರು, ಕೆಟ್ಟವರು ಎಲ್ಲರೂ ಬರುತ್ತಾರೆ. ನನ್ನ ಬಳಿ ಬರುವವರನ್ನು ಸತ್ಯವಂತರು, ಸುಳ್ಳು ಹೇಳುವವರು ಎಂದು ಪರಿಶೀಲಿಸಿಕೊಂಡು ಕೂರಲು ಸಾಧ್ಯವೇ? ನಾನು ಯಾವುದೇ ತಪ್ಪು ಮಾಡಿಲ್ಲ, ಮಾತನಾಡಿಲ್ಲ ಎಂದರು.

ಆರೋಪಕ್ಕೆ ಏನಾದರೂ ಆಧಾರ ಇರಬೇಕಲ್ಲವೇ?

ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆಗೆ ಸೇರಬೇಕಾದವರ ಮಾತಿಗೆ ಪ್ರಾಮು ಖ್ಯತೆ ನೀಡುವುದು ಸರಿಯಲ್ಲ. ದೇವರಾಜೇಗೌಡ ಮೆಂಟಲ್ ಗಿರಾಕಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ವಕೀಲ ದೇವರಾಜೇಗೌಡ ಹೇಳಿಕೆಗೆ ಸಚಿವರು ಗರಂ

ಬೆಂಗಳೂರು: ಪೆನ್‌ಡ್ರೈವ್ ಪ್ರಕರಣ ನೋಡಿಕೊಳ್ಳಲು ಡಿ.ಕೆ.ಶಿವಕುಮಾರ್ 4 ಮಂತ್ರಿಗಳ ತಂಡ ರಚಿಸಿದ್ದಾರೆ ಎಂಬ ದೇವರಾಜೇಗೌಡ ಹೇಳಿಕೆಗೆ ಸಚಿವರು ಕಿಡಿಕಾರಿದ್ದಾರೆ. ಇಂತಹ ಆರೋಪ ಮಾಡುವ ದೇವರಾಜೇಗೌಡ ಮೊದಲು ಜೈಲಿನಿಂದ ಆಚೆ ಬರಲಿ ಎಂದು ರಾಮಲಿಂಗಾ ರೆಡ್ಡಿ, ಆತ ಯಾರೆಂದೇ ನನಗೆ ಗೊತ್ತಿಲ್ಲ ಎಂದು ಚಲುವ ರಾಯಸ್ವಾಮಿ, ಅಮಿತ್ ಶಾ ಕೈಲಿ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ