
ಬೆಂಗಳೂರು (ಸೆ.20): ಕರ್ನಾಟಕದ ಮೊದಲ ‘ಕಿಸಾನ್ ರೈಲು’ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಕೆಎಸ್ಆರ್)ದಿಂದ ದೆಹಲಿಯ ನಿಜಾಮುದ್ದೀನ್ಗೆ ಶನಿವಾರ ಸಂಜೆ ಪ್ರಯಾಣ ಬೆಳೆಸಿತು.
ಶನಿವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಹೊರಟಿರುವ ಈ ರೈಲು ಸೋಮವಾರ ರಾತ್ರಿ 11.45ಕ್ಕೆ ನಿಜಾಮುದ್ದೀನ್ ತಲುಪಲಿದೆ. ಈ ರೈಲಿಗೆ ಕೆಎಸ್ಆರ್ ನಿಲ್ದಾಣದ ಸ್ಟೇಷನ್ ಮಾಸ್ಟರ್ ಹಸಿರು ನಿಶಾನೆ ತೋರಿದ್ದಾರೆ. ಕಿಸಾನ್ ರೈಲಿನಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್, ಕ್ಯಾಪ್ಸಿಕಂ, ಮೆಣಸಿನಕಾಯಿ, ಹಾಲು, ಮಾಂಸ, ಮೀನು ಸೇರಿದಂತೆ ಬೇಗನೆ ಕೆಡಬಲ್ಲ ಪದಾರ್ಥಗಳನ್ನು ಸಾಗಿಸಬಹುದಾಗಿದೆ.
ಡ್ರೋನ್ ಮೂಲಕ ಪಾಕ್ನಿಂದ ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ! .
ಅದಕ್ಕಾಗಿ ಕೋಲ್ಡ್ ಸ್ಟೋರೇಜ್ ಬೋಗಿಗಳನ್ನು ಅಳವಡಿಸಲಾಗಿದೆ. ಇದು ಬಹು ವಿಧದ ರೈಲಾಗಿದ್ದು, ಒಂದು ಸಂಸ್ಥೆ ಅಥವಾ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಸರಕುಗಳನ್ನು ಮಾತ್ರ ರೈಲಿನಲ್ಲಿ ತೆಗೆದುಕೊಂಡು ಹೋಗುವುದಿಲ್ಲ. ರೈತರು ಬೆಳೆದ ಯಾವುದೇ ತರಕಾರಿಗಳನ್ನು ಸಾಗಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ