Bengaluru- ಜೀರೋ ರೌಡಿಸಂ, ಡ್ರಗ್ಸ್‌ ಮುಕ್ತ ಬೆಂಗಳೂರು ನಮ್ಮ ಗುರಿ: ಡಿಜಿ-ಐಜಿಪಿ ಅಲೋಕ್ ಮೋಹನ್

Published : May 25, 2023, 05:25 PM ISTUpdated : May 25, 2023, 05:36 PM IST
Bengaluru- ಜೀರೋ ರೌಡಿಸಂ, ಡ್ರಗ್ಸ್‌ ಮುಕ್ತ ಬೆಂಗಳೂರು ನಮ್ಮ ಗುರಿ:  ಡಿಜಿ-ಐಜಿಪಿ ಅಲೋಕ್ ಮೋಹನ್

ಸಾರಾಂಶ

ಜೀರೋ ರೌಡಿಸಂ ಹಾಗೂ ಡ್ರಗ್ಸ್ ಮುಕ್ತ ಬೆಂಗಳೂರು ನಮ್ಮ ಗುರಿಯಾಗಿದೆ ಎಂದು ನೂತನ ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ತಿಳಿಸಿದ್ದಾರೆ. 

ಬೆಂಗಳೂರು (ಮೇ 25): ರಾಜ್ಯದ ರಾಜಧಾನಿ ಬೆಂಗಳೂರನ್ನು ಜೀರೋ ರೌಡಿಸಂ ಮಾಡುವುದು ನಮ್ಮ ಆದ್ಯತೆಯಾಗಿದೆ. ನಂತರ ಡ್ರಗ್ಸ್ ಮುಕ್ತ ನಗರವಾಗಿ ಬೆಂಗಳೂರನ್ನ ಮಾಡ್ತೀವಿ ಎಂದು ನೂತನ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ (ಡಿಜಿ ಮತ್ತು ಐಜಿಪಿ) ಅಲೋಕ್‌ ಮೋಹನ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು (ಗುರುವಾರ) ಬೆಂಗಳೂರು ಪೊಲೀಸರೊಂದಿಗೆ ಸಭೆ ಮಾಡಿದ್ದೀನಿ. ಜೀರೋ ರೌಡಿಸಂ ಮಾಡುವುದು ನಮ್ಮ ಆದ್ಯತೆಯಾಗಿದೆ. ನಂತರ ಡ್ರಗ್ಸ್ ಮುಕ್ತ ನಗರವಾಗಿ ಬೆಂಗಳೂರನ್ನ ಮಾಡುತ್ತೇವೆ. ಪೊಲೀಸರಿಂದ ಉತ್ತಮ ವರ್ತನೆ ತೋರುವುದು ಕಡ್ಡಾಯ ಆಗಬೇಕು. ಜನಸ್ನೇಹಿ ಪೊಲೀಸ್ ಆಗುವುದು ಬಹಳ ಮುಖ್ಯವಾಗಿ ಮಾಡ್ತೀವಿ. ಅಲ್ಲದೆ ನಗರದಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನ ಸಹಿಸುವುದಿಲ್ಲ ಎಂದು ಹೇಳಿದರು.

Bengaluru- ಬೇಡ ಬೇಡ ಅಂದ್ರೂ ಆಂಟಿಯೊಂದಿಗೆ ಅನೈತಿಕ ಸಂಬಂಧ: ಮಹಿಳೆ ಗಂಡನಿಂದ ಯುವಕನ ಕೊಲೆ

ಪೊಲೀಸರ ದೈಹಿಕ ಸಾಮರ್ಥ್ಯದ ಮೇಲೆ ನಿಗಾ:  ರಾಜ್ಯಾದ್ಯಂತ ಪೊಲೀಸರ ದೈಹಿಕ ಸಾಮರ್ಥ್ಯದ ಬಗ್ಗೆಯೂ ಗಮನ ಹರಿಸಲಾಗುವುದು. ಅವರು ದೈಹಿಕವಾಗಿ ಸಧೃಡರಾಗಿರುವಂತೆ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಹಿರಿಯ ಅಧಿಕಾರಿಗಳಿಗೂ ಪ್ರಕರಣಗಳ ಬಗ್ಗೆ ಕಾಲ ಕಾಲಕ್ಕೂ ಪರಿಶೀಲನೆ ಮಾಡಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸರ ನಿರ್ಲಕ್ಷ್ಯವನ್ನ ಸಹಿಸಲಾಗುವುದಿಲ್ಲ. ಯಾರಿಗೂ ಬೆಂಗಳೂರಿನಲ್ಲಿ ಸಮಸ್ಯೆ ಉಂಟು ಮಾಡಲು ಅವಕಾಶ ನೀಡುವುದಿಲ್ಲ. ಜೊತೆಗೆ, ಸಂಚಾರಿ ವ್ಯವಸ್ಥೆಯ ಬಗ್ಗೆಯೂ ಸಾಕಷ್ಟು ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಹಿಳೆ, ಮಕ್ಕಳ ಸುರಕ್ಷತೆಗೆ ಕ್ರಮ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಮಹಿಳೆ ಹಾಗೂ ಮಕ್ಕಳ ಸುರಕ್ಷತೆ, ಸೈಬರ್ ಕ್ರೈಂಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸ್ ಠಾಣೆಗೆ ಬರುವ ಎಲ್ಲ ದೂರುಗಳನ್ನು ಸ್ವೀಕರಿಸಬೇಕು. ಪೊಲೀಸರಿಗೆ ಇನ್ನೂ ಕೆಲವು ಟೆಕ್ನಿಕಲ್ ಟ್ರೈನಿಂಗ್ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಕೂಡ ಮುಖ್ಯವಾಗಿದ್ದು, ಎಲ್ಲಿಯೂ ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಗಮನ ಹರಿಸಲಾಗುವುದು, ಎಂದು ನೂತನ ಡಿಜಿ-ಐಜಿಪಿ ಅಲೋಕ್ ಮೋಹನ್ (Karnataka State New Director General of Police (DG) and Inspector General of Police (IGP) Alok Mohan) ಹೇಳಿದ್ದರು. 

ಪ್ರವೀಣ್‌ ಸೂದ್‌ ಸಿಬಿಐ ನಿರ್ದೇಶಕರಾಗಿ ನೇಮಕ ಹಿನ್ನೆಲೆ; ಡಿಜಿಪಿಯಾಗಿ ಅಲೋಕ್‌ ಪದಗ್ರಹಣ

ಕರ್ನಾಟಕದಲ್ಲಿ 36 ವರ್ಷಗಳ ಸೇವೆ:  ಬಿಹಾರ ಮೂಲದ ಅಲೋಕ್‌ ಮೋಹನ್‌ ಅವರು 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ರಾಜ್ಯದಲ್ಲಿ 36 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಜೊತೆಗೆ, ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ವಿಭಾಗಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಅನುಭವ ಇವರಿಗಿದೆ. ಇನ್ನು ನೂತನ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರು 2025ರ ಏಪ್ರಿಲ್‌ನಲ್ಲಿ ನಿವೃತ್ತಿಯಾಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ