ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

Published : Sep 05, 2022, 03:37 PM IST
ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಸಾರಾಂಶ

ನಿವೃತ್ತ ಶಿಕ್ಷಕ, ಮಾಜಿ ಸಚಿವರೊಬ್ಬರು ಶಿಕ್ಷಕರ ದಿನಾಚರಣೆಯಂದೇ ನಿಧನರಾಗಿದ್ದಾರೆ. ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು.

ಕಾರವಾರ, (ಸೆಪ್ಟೆಂಬರ್.05): ಶಿಕ್ಷಕರ ದಿನಾಚರಣೆಯಂದೇ ನಿವೃತ್ತ ಶಿಕ್ಷಕರೊಬ್ಬರು ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ವಿದ್ಯಾ ದಾನ ಮಾಡಿದ್ದ ಮಾಜಿ ಸಚಿವ ಪ್ರಭಾಕರ್ ರಾಣೆ (81) ಅವರು ಇಂದು(ಸೆಪ್ಟೆಂಬರ್ 05) ಮಧ್ಯಾಹ್ನ ಇಹಲೋಕತ್ಯಾಜಿಸಿದ್ದಾರೆ.

ತಿಂಗಳ ಹಿಂದೆ ಜ್ವರದಿಂದ ಬಳಲಿತ್ತಿದ್ದ ಅವರು, ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಪಡೆದುಕೊಂಡಿದ್ದರು. ನಂತರ ಕೊಂಚ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ ಅಗಿದ್ದರು, ಆದ್ರೆ,.ಇಂದು ಅವರ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ ಇನ್ನಿಲ್ಲ: ಸಾವಿನಲ್ಲೂ ಸಾರ್ಥಕತೆ ಮೆರೆದ ಜನಮೆಚ್ಚಿದ ಡಾಕ್ಟರ್

ಶಿಕ್ಷಕರನ್ನು ಸಂಘಟಿಸಿದ್ರು ರಾಣೆ
 ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರ್ಪಡೆಗೊಂಡು ಸೇವೆ ಸಲ್ಲಿಸಿದ್ದ ಅವರು,  ಶಿಕ್ಷಕರನ್ನು ಸಂಘಟಿಸಿದ್ದರು. ಬಳಿಕ ಅದೇ ಸಂಸ್ಥೆಗೆ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಆರಂಭಿಸಿ, ವಿವಿಧೆಡೆ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದರು.

ರಾಜಕೀಯ ಜರ್ನಿ
ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. 1993 ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ವಯಸ್ಕರ ಶಿಕ್ಷಣ ಮತ್ತು ಸಾಕ್ಷರತೆ ಶಿಕ್ಷಣ ಖಾತೆ ಪಡೆದು 10 ತಿಂಗಳು ಸಚಿವರಾಗಿದ್ದರು. ಬಂಗಾರಪ್ಪ ಅವರ ಕ್ಲಾಸಿಕ್ ಕಂಪ್ಯೂಟರ್ ಹಗರಣವನ್ನು ಸದನದಲ್ಲಿ ಪ್ರಶ್ನಿಸಿ ,ಬಂಗಾರಪ್ಪ ಅಧಿಕಾರ ಕಳೆದುಕೊಳ್ಳಲು ಕಾರಣರಾಗಿದ್ದರು.

ಕಾರವಾರ- ಜೊಯಿಡಾ ಶಾಸಕರಾಗಿ ಮೂರು ಅವಧಿ ಪೂರೈಸಿದ್ದ ಅವರು 1996 ರಲ್ಲಿ ಸೋಲು ಅನುಭವಿಸಿದ್ದರು. ನಂತರ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕ ವಸಂತ ಅಸ್ನೋಟಿಕರ್ ವಿರುದ್ಧ ಸೋಲು ಕಂಡಿದ್ದರು. ಬಳಿಕ ಜೆಡಿಎಸ್‌ನಿಂದಲೂ ಸ್ಪರ್ಧಿಸಿ ಮತ್ತೆ ಪರಾಭವಗೊಂಡಿದ್ದರು. ತದನಂತರ ಅವರು ರಾಜಕೀಯದಿಂದ ದೂರು ಉಳಿದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!