
ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡುವ ತಜ್ಞರ ಸಮಿತಿಯ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಸಜ್ಜಾಗಿದೆ. ಇಂದು ಇಲಾಖೆ ಪ್ರಧಾನ ಕಾರ್ಯದರ್ಶಿಯವರ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ ನಂತರ ಸೋಮವಾರ ವರದಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಸರ್ಕಾರ ತಜ್ಞರ ಸಮಿತಿಗೆ ಅಧ್ಯಯನ ನಡೆಸುವಂತೆ ಸೂಚನೆ ನೀಡಿತ್ತು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ 12 ಸದಸ್ಯರ ತಜ್ಞರ ತಂಡ ಈ ಅಧ್ಯಯನವನ್ನು ನಡೆಸಿದ್ದು, ಕೋವಿಡ್ ಲಸಿಕೆ ಪಡೆದ 250 ಮಂದಿಯ ಮೇಲೆ ಅಧ್ಯಯನ ನಡೆಸಲಾಗಿದೆ.
ಕೋವಿಡ್ ಲಸಿಕೆ ಮತ್ತು ಹೃದಯಾಘಾತ ನಡುವೆ ನೇರ ಸಂಪರ್ಕವಿಲ್ಲ ಎಂಬ ಸ್ಪಷ್ಟತೆ ನೀಡಿರುವ ವರದಿ, ಸಾರ್ವಜನಿಕರಲ್ಲಿ ಭಯ ನಿವಾರಣೆಗೆ ಸಹಾಯ ಮಾಡುವ ನಿರೀಕ್ಷೆ ಇದೆ. ಈ ಅಧ್ಯಯನದ ವರದಿ ಆಧಾರದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.
ಕಳೆದ ಕೆಲವು ತಿಂಗಳುಗಳಿಂದ ಹಾಸನ ಜಿಲ್ಲೆಯಲ್ಲಿ ಹೃದಯಾಘಾತ (Heart Attack) ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು, ಜಿಲ್ಲೆಯ ನಾಗರಿಕರಲ್ಲಿ ಆತಂಕ ಮೂಡಿಸಿದೆ. ಒಂದೇ ತಿಂಗಳಲ್ಲಿ 20ಕ್ಕೂ ಹೆಚ್ಚು ಹೃದಯಾಘಾತದ ಸಾವು ಸಂಭವಿಸಿದೆ. ಅತಿಯಾದ ಮಾಂಸಾಹಾರ ಸೇವನೆ, ಜೀವನಶೈಲಿಯ ಬದಲಾವಣೆ ಮತ್ತು ಕೆಲಸದ ಒತ್ತಡ ಕಾರಣವಾಗಿರಬಹುದುಎ ಎಂದು ಹಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ ಬೆಳೆದಿರುವ ಅತಿಯಾದ ಮಾನಸಿಕ ಒತ್ತಡ, ಶಾರೀರಿಕ ಚಟುವಟಿಕೆಯ ಕೊರತೆ, ಹಾಗೂ ಅನಾರೋಗ್ಯಕರ ಆಹಾರಪದ್ದತಿಗಳು ಹೃದಯದ ಆರೋಗ್ಯಕ್ಕೆ ಅಪಾಯಕಾರಿಯಾಗಿವೆ. ತಿನ್ನುವ ಆಹಾರದಲ್ಲಿ ಕೊಬ್ಬು, ಉಪ್ಪು ಮತ್ತು ತೈಲಾಂಶದ ಪ್ರಮಾಣವನ್ನು ನಿಯಂತ್ರಿಸುವುದು, ನಿಯಮಿತ ವ್ಯಾಯಾಮ ಮತ್ತು ಮಾನಸಿಕ ಸಂತೂಲನ ಕಾಯ್ದುಕೊಳ್ಳುವುದು ಹೃದಯಾಘಾತದ ಅಪಾಯ ತಗ್ಗಿಸಲು ಮುಖ್ಯವಾಗಿದೆ. 6 ತಿಂಗಳಿಗೆ ಒಮ್ಮೆಯಾದರೂ ಪರೀಕ್ಷಿಸಿಕೊಂಡು ಚಿಕಿತ್ಸೆ ನೀಡಿದರೆ ಹೃದಯಾಘಾತದ ಹಾನಿಯನ್ನು ಕಡಿಮೆ ಮಾಡಬಹುದು ಎಂಬುದು ಹಲವರ ಅಭಿಪ್ರಾಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ