ಪುತ್ರನಿಗೆ ಟಿಕೆಟ್ ಸಿಗದ್ದಕ್ಕೆ ಈಶ್ವರಪ್ಪ ಬಂಡಾಯ! ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Published : Mar 15, 2024, 08:39 PM IST
ಪುತ್ರನಿಗೆ ಟಿಕೆಟ್ ಸಿಗದ್ದಕ್ಕೆ ಈಶ್ವರಪ್ಪ ಬಂಡಾಯ! ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಸಾರಾಂಶ

ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಾನು ಹೇಳಿದ್ದೆ? ಎಲ್ಲ ಅವರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ (ಮಾ.15): ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಾನು ಹೇಳಿದ್ದೆ? ಎಲ್ಲ ಅವರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪರ ಬಂಡಾಯದ ಬಗ್ಗೆ ನಾನು ಈಗ ಏನು ಹೇಳಲು ಆಗೊಲ್ಲ. ಮಾಜಿ ಶಾಸಕ ಓಲೇಕಾರ್ ನಿಲುವು ಗೊತ್ತಿಲ್ಲ. ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುವೆ ಎಂದರು.

ಶಿವಮೊಗ್ಗದಲ್ಲಿ ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

ನನಗೆ ಶಿಗ್ಗಾವಿ ಜೊತೆ ಭಾವನಾತ್ಮಕ ಸಂಬಂಧ ಇದೆ. ಎಲ್ಲಾ ತಾಲೂಕುಗಳ ಅಭಿವೃದ್ಧಿ ಜೊತೆ ಶಿಗ್ಗಾವಿ ಅಭಿವೃದ್ಧಿ ಮಾಡಲಾಗುತ್ತೆ. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪ್ರಧಾನಿ, ನಡ್ಡಾ ಗೃಹ ಸಚಿವರು ತಿಳಿಸಿದ ಬಳಿಕ ನಿರ್ಧಾರ ಮಾಡಬೇಕಾಯಿತು. ಅನಿವಾರ್ಯ ಇದೆ ನೀನು ಸ್ಪರ್ಧಿಸು ಎಂದು ಪ್ರಧಾನಮಂತ್ರಿಗಳು, ವರಿಷ್ಠರು ಹೇಳಿದರು. ಹೀಗಾಗಿ ನಾನು ಸ್ಪರ್ಧೆ ಮಾಡ್ತಿದ್ದೇನೆ ಎಂದರು.

ಯಡಿಯೂರಪ್ಪ ಯಾರಿಗೂ ದ್ರೋಹ ಮಾಡಿಲ್ಲ: ಬಿ.ವೈ.ರಾಘವೇಂದ್ರ

ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೇಟ್ ವಿಚಾರ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ನಾನು ಹೇಳಲು ಆಗೊಲ್ಲ. ಆ ಸಂದರ್ಭದಲ್ಲಿ  ಜನರ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಕೇಳಬೇಕು ಎಂದರು. ಇದೇ ವೇಳೆ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಸ್ಪರ್ದೆ ನೆಡಸಿದ ವಿಚಾರಕ್ಕೆ ಅವರ ಬಳಿ ನಾನು ಮಾತನಾಡುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ! ಬಿಇಒ, ಡಿಡಿಪಿಐ ಯಾರಿಂದಲೂ ಸ್ಪಷ್ಟ ಉತ್ತರವಿಲ್ಲ! ಯಾರನ್ನು ಕೇಳುವುದು?
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!