ಧಾರವಾಡ: ಎರಡೇ ವರ್ಷದಲ್ಲಿ 101 ಅನ್ನದಾತರು ಆತ್ಮಹತ್ಯೆ! 

Published : Jul 09, 2024, 05:43 PM ISTUpdated : Jul 09, 2024, 06:27 PM IST
ಧಾರವಾಡ: ಎರಡೇ ವರ್ಷದಲ್ಲಿ 101 ಅನ್ನದಾತರು ಆತ್ಮಹತ್ಯೆ! 

ಸಾರಾಂಶ

ಪ್ರಸಕ್ತ ವರ್ಷ ಕರ್ನಾಟಕದಲ್ಲಿ ವರುಣದೇವ ಕೃಪೆ ತೋರಿದರೂ, ಅನ್ನದಾತರ ಮರಣ ಮೃದಂಗ(ಆತ್ಮಹತ್ಯೆ) ನಿಲುತ್ತಿಲ್ಲ ಇದಕ್ಕೆ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ! ಹೌದು ಕಳೆದ ಒಂದು ವರ್ಷದ ಅವಧಿಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಬರೋಬ್ಬರಿ 10 ಅನ್ನದಾತರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ಖೇದಕರ ಸಂಗತಿ. 

ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ
ಧಾರವಾಡ (ಜು.9): ಪ್ರಸಕ್ತ ವರ್ಷ ಕರ್ನಾಟಕದಲ್ಲಿ ವರುಣದೇವ ಕೃಪೆ ತೋರಿದರೂ, ಅನ್ನದಾತರ ಮರಣ ಮೃದಂಗ(ಆತ್ಮಹತ್ಯೆ) ನಿಲುತ್ತಿಲ್ಲ ಇದಕ್ಕೆ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ! ಹೌದು ಕಳೆದ ಒಂದು ವರ್ಷದ ಅವಧಿಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಬರೋಬ್ಬರಿ 10 ಅನ್ನದಾತರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ಖೇದಕರ ಸಂಗತಿ. 

95 ಜನಕ್ಕೆ ಪರಿಹಾರ: ಒಟ್ಟು 101 ರೈತರಲ್ಲಿ 75 ರೈತರು ಸಾಲಬಾಧೆಯಿಂದ ಮೃತಪಟ್ಟಿದ್ದಾರೆ ಇವರಲ್ಲಿ 73 ಜನಕ್ಕೆ ಪರಿಹಾರ ನೀಡಿದೆ. 26 ಪ್ರಕರಣ ತಿರಸ್ಕೃತವಾಗಿದ್ದು 2 ಪ್ರಕರಣ ಜಿಲ್ಲಾಧಿಕಾರಿಗಳ ಪರಿಶೀಲನೆ ಹಂತದಲ್ಲಿವೆ. 

ಬೆಂಬಲ ಬೆಲೆಯಡಿ ಅರ್ಧಕ್ಕಿಂತ ಕಡಿಮೆ ರಾಗಿ ಖರೀದಿ: ರೈತರು ಮಾರಿದ್ದು 2.26 ಲಕ್ಷ ಟನ್

ಕೇಂದ್ರ-ರಾಜ್ಯ ಸರ್ಕಾರ ರೈತರ ಕಲ್ಯಾಣ,ಆರ್ಥಿಕತೆ ಸುಧಾರಣೆಗೆ ಅನೇಕ ಯೋಜನೆ ಅನುಷ್ಠಾನಗೊಳಿಸಿದೆ. ಆತ್ಮಹತ್ಯೆ ತಡೆಗೆ ಜಾಗೃತಿ ಮೂಡಿಸಿವೆ ಆದರೂ ಆತ್ಮಹತ್ಯೆ ನಿಲ್ಲುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದರೂ ಕೂಡ ಕೃಷಿ ಮಾರುಕಟ್ಟೆಯಲ್ಲಿ ರೈತ ಉತ್ಪಾದಿಸಿದ ಉತ್ಪನ್ನಕ್ಕೆ ಯೋಗ್ಯ ಬೆಲೆ ಲಭಿಸುತ್ತಿಲ್ಲ.
 
ಆತ್ಮಹತ್ಯೆಗೆ ಕಾಣಗಳನ್ನ ನೋಡುತ್ತಾ ಹೋದರೆ ಬರ, ಅತಿವೃಷ್ಟಿ, ಅನಾವೃಷ್ಟಿ, ನೆರೆಹಾವಳಿ, ಪ್ರವಾಹ ಅನೇಕ ಪ್ರಕೃತಿ ವಿಕೋಪ ರೈತರನ್ನು ಹೈರಾಣಾಗಿಸಿವೆ. ಮಾಡಿದ ಸಾಲ ತೀರಿಸಲಾಗದೆ ಬಹುತೇಕ ರೈತರು ಆತ್ಮಹತ್ಯೆ ದಾರಿ ತುಳಿದಿರುವುದು ಆತಂಕ ಮೂಡಿಸುವಂತಾಗಿದೆ.

ರಾಜ್ಯಮಟ್ಟದ ರೇನ್‌ಬೋ ಮೀಡಿಯಾ ಹಬ್ಬ ಆಯೋಜನೆ: ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆ

ಕಳೆದ 2023-2025 ಜುಲೈ 6 ವರೆಗೆ ಜಿಲ್ಲೆಯ 101 ರೈತರು ಆತ್ಮಹತ್ಯೆಗೆ ಶರಣರಾಗಿದ್ದು ಮೃತರಲ್ಲಿ ಬಹುತೇಕರು ಸಾಲಬಾಧೆ ತಾಳಲಾರದೆ,ನೇಣು ಕುಣಿಕೆಗೆ ಕೊರಳೊಡ್ಡಿದ್ದರೆ ಕೆಲವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕ್ಕೊಂಡಿದ್ದಾರೆ. ಕೇಂದ್ರ-ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿ ನೆರವಿಗೆ ಬರಬೇಕು ಎಂಬ ರೈತಕುಲದ ಒತ್ತಾಸೆಯ ನಿಟ್ಟಿನಲ್ಲಿ ಕೈ ಸರ್ಕಾರ ಕ್ರಮ ಕೈಗೊಳ್ಳುವುದೇ ಕಾದುನೋಡಬೇಕಿದೆ. ಉದ್ಯಮಿಗಳ ಸಾಲಮನ್ನಾ ಮಾಡುವ ಕೇಂದ್ರ ಸರ್ಕಾರ, ರೈತರ ಸಾಲಮನ್ನಾಕ್ಕೆ ಮೀನಾಮೇಷ ಏಕೆ? ಒಮ್ಮೆ ಸಂಪೂರ್ಣ ಸಾಲಮನ್ನಾ ಮಾಡುವ ಮೂಲಕ ರೈತರನ್ನು ಋಣಮುಕ್ತಗೊಳಿಸಲಿ ಎಂಬ ಕೂಗುಗಳು ಕೇಳಿ ಬರುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ