ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬಂಪರ್ ಆಫರ್, ಬಡ್ಡಿ ಇಲ್ಲದೇ ಸಾಲ

Kannadaprabha News   | Asianet News
Published : Sep 15, 2020, 08:23 AM ISTUpdated : Sep 15, 2020, 08:27 AM IST
ರಾಜ್ಯದ ರೈತರಿಗೆ ಗುಡ್ ನ್ಯೂಸ್ :  ಬಂಪರ್ ಆಫರ್, ಬಡ್ಡಿ ಇಲ್ಲದೇ ಸಾಲ

ಸಾರಾಂಶ

ರಾಜ್ಯದಲ್ಲಿ ರೈತರಿಗೆ ಇಲ್ಲಿಗೆ ಬಂಪರ್ ಗುಡ್ ನ್ಯೂಸ್. ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆದುಕೊಳ್ಳುವ ಅವಕಾಶ ಇಲ್ಲಿದೆ. 

ಬೆಂಗಳೂರು (ಶೆ.15):  ರಾಜ್ಯದಲ್ಲಿ ರೈತರಿಗೆ ಪ್ರಸಕ್ತ ಸಾಲಿನ (2020-21) ಅಲ್ಪಾವಧಿ ಬೆಳೆ ಸಾಲ ನೀಡಲು ಸಹಕಾರ ಇಲಾಖೆ ಆದೇಶಿಸಿದ್ದು, ರಾಜ್ಯದ್ಯಂತ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸಿ ಶೂನ್ಯ ಬಡ್ಡಿ ದರದಲ್ಲಿ ಮೂರು ಲಕ್ಷ ರು.ವರೆಗೆ ಬೆಳೆ ಸಾಲ ಪಡೆಯಬಹುದು ಎಂದು ಸೂಚಿಸಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್‌ನ ಶಾಖೆ, ಪಿಕಾರ್ಡ್‌ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ನವೀಕರಣ ಹಾಗೂ ಹೊಸ ಸಾಲ ಪಡೆಯಲು ಅಗತ್ಯ ಅರ್ಜಿಗಳ ವಿತರಣೆಗೆ ಆದೇಶಿಸಲಾಗಿದೆ. ಜತೆಗೆ ಸಾಲದ ಅರ್ಜಿಗಳನ್ನು ಸ್ವೀಕರಿಸಿದ ಮತ್ತು ಸಾಲ ಮಂಜೂರಾದ ವಿವರಗಳನ್ನು ನಮೂದಿಸಲು ಪ್ರತ್ಯೇಕ ರಿಜಿಸ್ಟರ್‌ನ್ನು ನಿರ್ವಹಿಸಬೇಕು.

'ರೈತರೇ ಬೆಲೆ ನಿಗದಿಪಡಿಸುವ ವ್ಯವಸ್ಥೆ ಬರಲಿ' ..

ಸೆಪ್ಟೆಂಬರ್‌ 20 ರೊಳಗಾಗಿ ಆಯಾ ಡಿಸಿಸಿ ಬ್ಯಾಂಕ್‌ನ ಒಟ್ಟಾರೆ ಸದಸ್ಯರು, ಹೊಸ ಸದಸ್ಯರು ಮತ್ತು ಪರಿಶಿಷ್ಟಜಾತಿ, ಪಂಗಡದ ಸದಸ್ಯರಿಗೆ ಮಾಸಿಕವಾರು ಸಾಲ ನೀಡುವ ಗುರಿ ನಿಗದಿಪಡಿಸಿ ಕಚೇರಿಗೆ ಕಳುಹಿಸಬೇಕು. ರೈತ ಸರ್ಕಾರಿ ಅಥವಾ ಸರ್ಕಾರಿ ಸ್ವೌಮ್ಯದ ಸಂಸ್ಥೆಗಳಲ್ಲಿ ನೌಕರನಾಗಿದ್ದು 20 ಸಾವಿರಕ್ಕೂ ಹೆಚ್ಚು ವೇತನ ಪಡೆಯುತ್ತಿದ್ದರೆ ಅಂತಹವರಿಗೆ ಬಡ್ಡಿ ರಿಯಾಯಿತಿ ದೊರೆಯುವುದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸುವ ವೇಳೆಯಲ್ಲೇ ಈ ಬಗ್ಗೆ ಘೋಷಣಾ ಪತ್ರ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟ್ರಾಫಿಕ್ ಸಮಸ್ಯೆ ಮಾತ್ರವಲ್ಲ, ಇಂಗಾಲ ಹೊರಸೂಸುವಿಕೆಯಲ್ಲಿ ಕೂಡ ದೇಶದಲ್ಲೇ ಅಗ್ರ ಸ್ಥಾನ ಪಡೆದ ಬೆಂಗಳೂರು!
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್