ಕೃಷಿಕರಿಗೆ ಸಿಗಲಿದೆ 1 ಕೋಟಿ ರೂ. ಸಹಾಯಧನ: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಹಾಕಿ

Published : Jan 22, 2024, 07:22 PM IST
ಕೃಷಿಕರಿಗೆ ಸಿಗಲಿದೆ 1 ಕೋಟಿ ರೂ. ಸಹಾಯಧನ: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಹಾಕಿ

ಸಾರಾಂಶ

ರಾಜ್ಯ ಸರ್ಕಾರದಿಂದ ಕೃಷಿಕರಿಗೆ ಹಾಗೂ ಕೃಷಿಕ ಸಂಘಟನೆಗಳಿಗೆ ಹೈಟೆಕ್ ಹಾರ್ವೆಸ್ಟರ್ ಸ್ಥಾಪನೆಗೆ 1 ಕೋಟಿ ರೂ. ಸಹಾಯಧನ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.

ಬೆಂಗಳೂರು ನಗರ (ಜ.22): ಹೈಟೆಕ್  ಹಾರ್ವೆಸ್ಟರ್  ಹಬ್  ಯೋಜನೆಯಡಿ  ರೈತರು ಕೃಷಿ ಯಂತ್ರಧಾರೆ ಕೇಂದ್ರಗಳು / ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ  ಸಂಘ-ಸಂಸ್ಥೆ (Farm Machinery Bank –FMB ಗಳನ್ನೊಳಗೊಂಡಂತೆ) ಗಳಿಂದ ಹೈಟೆಕ್  ಹಾರ್ವೆಸ್ಟರ್  ಹಬ್ ಸ್ಥಾಪನೆಗೆ  ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ರೈತರಿಗೆ  ಗರಿಷ್ಠ ಶೇ.50ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ  ಗರಿಷ್ಠ ಶೇ.70 ರಂತೆ  ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ  ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ಕೃಷಿ ಯಂತ್ರೋಪಕರಣಗಳ  ಬ್ಯಾಂಕ್  Farm Machinery Bank –FMB ಗಳನ್ನೊಳಗೊಂಡಂತೆ) ಗರಿಷ್ಠ ಶೇ.70ರಂತೆ  ಸಹಾಯಧನ ನೀಡಲಾಗುವುದು. ವಿವಿಧ  ಹಾರ್ವೆಸ್ಟರ್  ಹಬ್ ಗಳಿಗೆ ನಿಗಧಿಪಡಿಸಿದ  ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು  ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್  ಹಾರ್ವೆಸ್ಟರ್  ಹಬ್ ಘಟಕಕ್ಕೆ ಗರಿಷ್ಠ ಮೊತ್ತ 1 ಕೋಟಿ ರೂ. ಮೀರದಂತೆ (ರೂ.5 ಲಕ್ಷ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ನೀಡಲಾಗುವುದು. ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು.

ಬಿಗ್‌ಬಾಸ್ ಕನ್ನಡದ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ತುಕಾಲಿ ಸಂತೋಷ್!

ಕೃಷಿ  ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು / ಸಂಘ-ಸಂಸ್ಥೆವಾರು (Farm Machinery Bank –FMB ಗಳನ್ನೊಳಗೊಂಡಂತೆ) ನಿಗಧಿಪಡಿಸಿದ  ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು credit linked back ended subsidy ಮುಖಾಂತರವೇ ನೀಡಲಾಗುವುದು. ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್  ಹಾರ್ವೆಸ್ಟರ್ ರೊಂದಿಗೆ BALER  ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ.

ರಾಮಮಂದಿರ ಉದ್ಘಾಟನೆ ವೇಳೆ 'ಜೈ ಶ್ರೀರಾಮ್' ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ!

ಆಯ್ಕೆಯಾದ ಫಲಾನುಭವಿಗಳ / ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ  (AIF-AGRICULTURAL INFRASTRUCTURE FUND) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ. ಹೈಟೆಕ್  ಹಾರ್ವೆಸ್ಟರ್  ಹಬ್  ಗಳಲ್ಲಿ  ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ  CORRIDOR  ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ನಗರ ಜಿಲ್ಲೆ ಇಲ್ಲಿ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ 080-26711594 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!