ಭ್ರೂಣ ಲಿಂಗಪತ್ತೆ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

Published : Jun 20, 2024, 07:09 PM ISTUpdated : Jun 20, 2024, 07:11 PM IST
ಭ್ರೂಣ ಲಿಂಗಪತ್ತೆ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಸಾರಾಂಶ

ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಬಗ್ಗೆ ಮಾಹಿತಿ ನೀಡುವವರಿಗೆ ಆರೋಗ್ಯ ಇಲಾಖೆಯಿಂದ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು (ಜೂ.20): ರಾಜ್ಯದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ (ಭ್ರೂಣ ಲಿಂಗಪತ್ತೆ) ಮಾಡುವ ಆಸ್ಪತ್ರೆಗಳು, ಸ್ಕ್ಯಾನಿಂಗ್ ಸೆಂಟರ್ ಸೇರಿ ಇತರೆಡೆ ಭ್ರೂಣ ಲಿಂಗಪತ್ತೆ ಮಾಡುವ ಬಗ್ಗೆ ಗುಪ್ತ ಕಾರ್ಯಾಚರಣೆ ಮೂಲಕ ಮಾಹಿತಿ ನೀಡುವವರಿಗೆ ಆರೋಗ್ಯ ಇಲಾಖೆಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಸರ್ಕಾರ ಆದೇಶಿಸಿದೆ.

ಈವರೆಗೆ ರಾಜ್ಯದಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವವಾಗಿ ಭ್ರೂಣಲಿಂಗ ಪತ್ತೆ ಮಾಡುವ ಗುಪ್ತ ಕಾರ್ಯಾಚರಣೆ ಅಥವಾ ಮಾಹಿತಿ ನೀಡುವವರಿಗೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ, ಈ ಬಹುಮಾನದ ಮೊತ್ತವನ್ನು ಸದರಿ 2024-25ನೇ ಆರ್ಥಿಕ ಸಾಲಿನಿಂದ 1,00,000 ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಅದರಂತೆ ಭ್ರೂಣಲಿಂಗ ಪತ್ತೆ ಯಶ್ವಸಿಗೊಂಡ ಗುಪ್ತಕಾರ್ಯಚಾರಣೆ / ಮಾಹಿತಿ ನೀಡುವವರಿಗೆ ನೀಡುವ ಬಹುಮಾನ ರೂ. 50,000 ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದಲೂ ಹಾಗೂ ಇನ್ನುಳಿದ ರೂ. 50,000 ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿ.ಸಿ & ಪಿ.ಎನ್.ಡಿ.ಟಿ. ಶುಲ್ಕದಿಂದ ನೀಡಲು ಆದೇಶಿಸಿದೆ.

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ

ಸರ್ಕಾರಿ ಆದೇಶದಲ್ಲಿ ಏನಿದೆ?
ಈ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಯಶ್ವಸಿಗೊಂಡ ಗುಪ್ತಕಾರ್ಯಾಚರಣೆಗೆ / ಮಾಹಿತಿ ನೀಡುವ ಮಾಹಿತಿದಾರರಿಗೆ ಈಗಾಗಲೇ 2024-25 ನೇ ಸಾಲಿನ ಆರ್.ಓ.ಪಿ. Sl.No. 19.13 ರಲ್ಲಿ ಅನುಮೋದನೆಯಾಗಿರುವಂತೆ ರೂ. 50,000/- (ರೂ. ಐವತ್ತು ಸಾವಿರಗಳು) ಬಹುಮಾನವಾಗಿ ನೀಡಲಾಗುತ್ತಿದೆ.

ಆದರೆ, 2023ರ ಡಿಸೆಂಬರ್‌ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೇಲ್ವಿಚಾರಣಾ ಮಂಡಳಿಯ ಸಭೆಯಲ್ಲಿ ಪಿ.ಸಿ & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೀಡುವ ರೂ. 50,000 ಮೊತ್ತವನ್ನು 1,00,000 ರೂ.ಗಳಿಗೆ ಏರಿಕೆ ಮಾಡಲು ನಿರ್ಧಾರಿಸಲಾಯಿತು. ಅದರಂತೆ, ಯಶ್ವಸಿಗೊಂಡ ಗುಪ್ತಕಾರ್ಯಚಾರಣೆ / ಮಾಹಿತಿ ನೀಡುವವರಿಗೆ ನೀಡುವ ಬಹುಮಾನ ರೂ. 50,000 ವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದಲೂ , ಇನ್ನುಳಿದ ರೂ. 50,000 ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿ.ಸಿ & ಪಿ.ಎನ್.ಡಿ.ಟಿ. ಶುಲ್ಕದಿಂದ ನೀಡಲು ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!