
ದಾವಣಗೆರೆ/ಬಾಗಲಕೋಟೆ (ಫೆ.17): ರಾಜ್ಯದ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಗ್ಯಾರೇಜ್ಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಬೆಂಕಿಗಾಹುತಿಯಾಗಿವೆ. ದಾವಣಗೆರೆಯಲ್ಲಿ ಕಾರುಗಳು ಸುಟ್ಟು ಭಸ್ಮವಾಗಿದ್ದರೆ, ಬಾಗಲಕೋಟೆಯ ಇಳಕಲ್ನಲ್ಲಿ ಸಾಲು ಸಾಲು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ದಾವಣಗೆರೆಯ ಹಳೆ ಪಿಬಿ ರಸ್ತೆಯ ಎಲ್ಐಸಿ ಕಚೇರಿ ಬಳಿ ಇರುವ ಅರುಣ್ ಎಂಬುವರಿಗೆ ಸೇರಿದ 'ಮಾರುತಿ ಗ್ಯಾರೇಜ್'ನಲ್ಲಿ ಇಂದು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಗ್ಯಾರೇಜ್ನಲ್ಲಿದ್ದ ಮೂರು ಕಾರುಗಳು ಹಾಗೂ ಒಂದು ಕ್ರೂಸರ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ತಕ್ಷಣವೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇತ್ತ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಗ್ಯಾರೇಜ್ವೊಂದು ಧಗಧಗನೆ ಹೊತ್ತಿ ಉರಿದಿದೆ. ಇಳಕಲ್ನ ಶ್ರೀನಿವಾಸ ಚಿತ್ರಮಂದಿರದ ಬಳಿ ಇರುವ ಕೃಷ್ಣಾ ವದ್ದಿ ಎಂಬುವರ ಗ್ಯಾರೇಜ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಂಕಿಯ ತೀವ್ರತೆಗೆ 8ಕ್ಕೂ ಹೆಚ್ಚು ಬೈಕ್ಗಳು ಹಾಗೂ ಒಂದು ವಾಟರ್ ವಾಷ್ ಮಷಿನ್ ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇಳಕಲ್ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಶಮನಗೊಳಿಸಿದ್ದು, ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ