ನನ್ನನ್ನು ಸೇರಿದಂತೆ ರಾಜಕಾರಣದಲ್ಲಿ ಯಾರೂ ನೈತಿಕತೆ ಉಳಿಸಿಕೊಂಡಿಲ್ಲ: ಎಚ್‌ಡಿಕೆ!

Published : Nov 23, 2019, 12:02 PM ISTUpdated : Nov 23, 2019, 03:48 PM IST
ನನ್ನನ್ನು ಸೇರಿದಂತೆ ರಾಜಕಾರಣದಲ್ಲಿ ಯಾರೂ ನೈತಿಕತೆ ಉಳಿಸಿಕೊಂಡಿಲ್ಲ: ಎಚ್‌ಡಿಕೆ!

ಸಾರಾಂಶ

ಮಹಾರಾಷ್ಟ್ರದಲ್ಲಿ ಬಿಜೆಪಿ ಎನ್‌ಸಿಪಿ ಸರ್ಕಾರ ರಚನೆ ವಿಚಾರ ದೇವ್ರೇ ಕಾಪಾಡಬೇಕು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ| ಇಷ್ಟು ದಿನ ಎನ್‌‌ಸಿಪಿ, ಶಿವಸೇನೆ ಸರ್ಕಾರ ರಚನೆ ಮಾಡ್ತಾರೆ ಅಂತಿದ್ರು, ಆದ್ರೀವತ್ತು ಬಿಜೆಪಿ ಎನ್‌‌ಸಿಪಿ ಸರ್ಕಾರ ರಚನೆ ಮಾಡಿದೆ| ಶರದ್ ಪವಾರ್ ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದವರು, ಇವತ್ತು ರಾಜಕಾರಣದಲ್ಲಿ ನೈತಿಕತೆ ಉಳಿದುಕೊಂಡಿಲ್ಲ

ಬೆಂಗಳೂರು[ನ.23]: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಪ್ರಹಸನ ಸರ್ಕಾರ ರಚಿಸಲು ತಯಾರಾಗಿದ್ದ ಶಿವಸೇನೆ ಹಾಗೂ ಕಾಂಗ್ರೆಸ್ ಗೆ ಬಹುದೊಡ್ಡ ಆಘಾತ ನೀಡಿದೆ. ಮಹಾರಾಷ್ಟ್ರದಲ್ಲಾದ ಈ ಕ್ಷಿಪ್ರ ಕ್ರಾಂತಿ ಇಡೀ ದೇಶದ ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿದೆ. ಶಿವಸೇನೆ ಹಾಗೂ ಕಾಂಗ್ರೆಸ್ ನಾಯಕರು ಇದು ವಂಚನೆ ಎಂದು ಬಣ್ಣಿಸಿದ್ದಾರೆ. ಹೀಗಿರುವಾಗ ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್, ಡಿ ಕುಮಾರಸ್ವಾಮಿ ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.

"

'ಮಹಾಶಯರು 9 ಗಂಟೆವರೆಗೆ ನಮ್ಮೊಂದಿಗೇ ಇದ್ರು ಬಳಿಕ ನಾಪತ್ತೆ, ಮೊಬೈಲೂ ಸ್ವಿಚ್ ಆಫ್'!

ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಚ್. ಡಿ. ಕುಮಾರಸ್ವಾಮಿ 'ಮಹಾರಾಷ್ಟ್ರವನ್ನು ದೇವರೇ ಕಾಪಾಡಬೇಕು. ಇಷ್ಟು ದಿನ ಎನ್‌‌ಸಿಪಿ, ಶಿವಸೇನೆ ಸರ್ಕಾರ ರಚನೆ ಮಾಡ್ತಾರೆ ಅಂತಿದ್ರು, ಆದರೆ ಈಗ ಬಿಜೆಪಿ ಎನ್‌‌ಸಿಪಿ ಸರ್ಕಾರ ರಚನೆ ಮಾಡಿದೆ. ಶರದ್ ಪವಾರ್ ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದವರು. ಇವತ್ತು ರಾಜಕಾರಣದಲ್ಲಿ ನೈತಿಕತೆ ಉಳಿದುಕೊಂಡಿಲ್ಲ' ಎಂದು ನುಡಿದಿದ್ದಾರೆ.

ಇನ್ನು ಕರ್ನಾಟಕದಲ್ಲಾದ ರಾಜಕೀಯ ಹಾಗೂ ಮಹಾರಾಷ್ಟ್ರದಲ್ಲಾದ ಬೆಳವಣಿಗೆಯನ್ನು ತಾಳೆ ಹಾಕಿ ಮಾತನಾಡಿದ ಮಾಜಿ ಸಿಎಂ 'ನನ್ನನ್ನು ಸೇರಿದಂತೆ  ರಾಜಕಾರಣದಲ್ಲಿ ಯಾರು ಕೂಡ ನೈತಿಕತೆಯನ್ನ ಉಳಿಸಿಕೊಂಡಿಲ್ಲ. ಸಿದ್ದಾಂತಗಳಿಗೆ ಬೆಲೆ ಇಲ್ಲದಂತಾಗಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಲಾಲ್ ಯಾದವ್ ಜೊತೆ ಸೇರಿಕೊಂಡಿದ್ರು, ಆನಂತರ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದ್ರು' ಎಂದಿದ್ದಾರೆ.

'ಮಹಾ' ರಾಜಕೀಯದಲ್ಲಿ ರೋಚಕ ತಿರುವು: 'ಸೇನೆ'ಗೆ ಶಾಕ್, ಫಡ್ನವೀಸ್ ಮತ್ತೆ ಸಿಎಂ!

ಮಹಾರಾಷ್ಟ್ರ ಸರರ್ಕಾರ ಉಳಿವಿನ ಬಗ್ಗೆಯೂ ಪ್ರಸ್ತಾಪಿಸಿದ ಕುಮಾರಸ್ವಾಮಿ 'ಮಹಾರಾಷ್ಟ್ರದಲ್ಲಿ ಅಗತ್ಯ ಸ್ಥಾನಗಳನ್ನು ಬಿಜೆಪಿ, ಎನ್‌ಸಿಪಿ ಹೊಂದಿವೆ. ಎಷ್ಟು ದಿನ ಸರ್ಕಾರ ಇರುತ್ತೆ ಅನ್ನೋದನ್ನ ನೋಡೋಣ' ಎಂದಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಹಲವು ಸುದ್ದಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ