
ಹಾಸನ (ಜ.25): ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಮರುಸೇರ್ಪಡೆ ಆಗಿರೋದು ಸಂತೋಷ ಆಗಿದೆ. ಜಗದೀಶ್ ಶೆಟ್ಟರ್ ಸಮರ್ಥ ನಾಯಕ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಾಗಿನ ಉತ್ಸಾಹ ಆಮೇಲೆ ತೋರಿಸಲಿಲ್ಲ. ಪಕ್ಷಕ್ಕೆ ಸೇರಿದ ಮೇಲೆ ಅವರನ್ನು ಮಂತ್ರಿ ಮಾಡುವ ಸೌಜನ್ಯವೂ ತೋರಿಸಲಿಲ್ಲ. ಕಾಂಗ್ರೆಸ್ ಹೇಗೆ ಮೋಸ ಮಾಡುತ್ತೆ ಅನ್ನೋದಕ್ಕೆ ಇದೇ ಉದಾಹರಣೆ ಎಂದು ಕಿಡಿಕಾರಿದರು.
ಹಾಸನದ ಆಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಓರ್ವ ಮಾಜಿ ಸಿಎಂ ಆಗಿ ರಾಜ್ಯದಲ್ಲಿ ಒಂದುಕಾಲು ವರ್ಷ ಸಮರ್ಥವಾಗಿ ಕೆಲಸ ಮಾಡಿದ್ದವರು, ವಿಪಕ್ಷ ನಾಯಕರಾಗಿದ್ದವರು, ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ ಮಾಡಲಿಲ್ಲ. ಹಿಂದೆ ಕಾಂಗ್ರೆಸ್ ಜೊತೆಗೆ ಮೈತ್ರಿ ಆದಾಗ ನನ್ನ ಮಗ ಸಿಎಂ ಬೇಡಾ ಎಂದೆ.ಆದರೂ ಮಾಡಿದ್ರು. ಹದಿಮೂರೇ ತಿಂಗಳಿಗೆ ಸರ್ಕಾರ ತೆಗೆದರು. ನಾನು ಪಿಎಂ ಆಗಿದ್ದಾಗ ವಾಜಪೇಯಿ ಉಳಿಸ್ತಿನಿ ಅಂದರು. ಕಾಂಗ್ರೆಸ್ ನ ದೌರ್ಬಲ್ಯ ಇದು. ಕಾಂಗ್ರೆಸ್ ಹಂತ ಹಂತವಾಗಿ ನೆಲ ಕಚ್ಚುತ್ತಿದೆ. ಲೋಕಸಭಾ ಚುನಾವಣೆ ಬಳಿಕ ಸಂಪೂರ್ಣ ನೆಲ ಕಚ್ಚಲಿದೆ ಎಂದರು.
ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಮರುಸೇರ್ಪಡೆ: ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ