ಒಳಮೀಸಲು ಹೊಸ ನಿಯಮಗಳನ್ವಯ ನ್ಯಾಯ ಬೆಲೆ ಅಂಗಡಿಗಳ ಹಂಚಿಕೆ, ಈ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ

Kannadaprabha News, Ravi Janekal |   | Kannada Prabha
Published : Sep 12, 2025, 08:55 AM IST
RAtion Shops

ಸಾರಾಂಶ

ರಾಜ್ಯದಲ್ಲಿ ಒಳಮೀಸಲಾತಿ ನಿಯಮಗಳ ಅನ್ವಯ ನ್ಯಾಯಬೆಲೆ ಅಂಗಡಿಗಳ ಹಂಚಿಕೆಗೆ ಸರ್ಕಾರ ಚಿಂತನೆ ನಡೆಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟು ನ್ಯಾಯಬೆಲೆ ಅಂಗಡಿಗಳ ಪೈಕಿ ಶೇ. 24ರಷ್ಟು ಮೀಸಲಿಡಲು ನಿರ್ಧರಿಸಲಾಗಿದೆ. ಹೊಸ ನಿಯಮಗಳ ಅನ್ವಯ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಹೆಚ್ಚಿನ ಪ್ರಾತಿನಿಧ್ಯ 

ಬೆಂಗಳೂರು (ಸೆ.12): ರಾಜ್ಯದಲ್ಲಿ ಇತ್ತೀಚೆಗೆ ಅನುಷ್ಠಾನಗೊಳಿಸಿರುವ ಒಳಮೀಸಲಾತಿ ನಿಯಮಗಳ ಅನ್ವಯವೇ ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳ ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ಸಂಬಂಧ ‘ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2014’ಕ್ಕೆ ತಿದ್ದುಪಡಿ ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಒಟ್ಟು ನ್ಯಾಯಬೆಲೆ ಅಂಗಡಿಗಳು ಎಷ್ತು?

ರಾಜ್ಯದಲ್ಲಿ ಒಟ್ಟು 20,473 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 988 ಪರಿಶಿಷ್ಟ ಜಾತಿ ಮತ್ತು 491 ಪರಿಶಿಷ್ಟ ಪಂಗಡ ಸಮುದಾಯದ ವ್ಯಕ್ತಿಗಳು ಮಾತ್ರ ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರ ಹೊಂದಿದ್ದಾರೆ. ಅಂದರೆ ಒಟ್ಟಾರೆ ಪರಿಶಿಷ್ಟ ಜಾತಿ ಸಮುದಾಯದ ಪ್ರಾತಿನಿಧ್ಯದ ಪೈಕಿ ಶೇ.4.82 ಹಾಗೂ ಪರಿಶಿಷ್ಟ ಪಂಗಡ ಶೇ.2.36 ಇದೆ. ಆದರೆ, ವಾಸ್ತವವಾಗಿ ಕ್ರಮವಾಗಿ 3,480 ಹಾಗೂ 1,433 ಇರಬೇಕಿತ್ತು. ಆದ್ದರಿಂದ ಆಯಾ ಜಿಲ್ಲೆಗಳಲ್ಲಿರುವ ಒಟ್ಟು ನ್ಯಾಯಬೆಲೆ ಅಂಗಡಿಗಳ ಪೈಕಿ ಶೇ. 24ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ.

ಪರಿಶಿಷ್ಟ ಜಾತಿಗೆ ನ್ಯಾಯಬೆಲೆ ಅಂಗಡಿ ಮಂಜೂರು?

ಶೇ.40ಕ್ಕಿಂತ ಹೆಚ್ಚು ಹೊಂದಿರುವ ಗ್ರಾಮ ಅಥವಾ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಈ ಸಮುದಾಯಗಳಿಗೆ ಮಂಜೂರು ಮಾಡಬೇಕು ಎಂಬುದಕ್ಕೆ ಒಪ್ಪಿಗೆ ನೀಡಲಾಗಿದೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಅದರಲ್ಲೂ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿರುವ ಶೇ.17ರಷ್ಟು ಮೀಸಲಾತಿಯಲ್ಲಿ ಪ್ರವರ್ಗ-ಎ ಮತ್ತು ಬಿ ಸಮುದಾಯಗಳಿಗೆ ಕ್ರಮವಾಗಿ ತಲಾ ಶೇ.6 ಹಾಗೂ ಪ್ರವರ್ಗ-ಸಿ ಸಮುದಾಯಗಳಿಗೆ ಶೇ.5ರಷ್ಟು ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ನ್ಯಾಯಬೆಲೆ ಅಂಗಡಿಗಳ ಹಂಚಿಕೆ ಸಂದರ್ಭದಲ್ಲಿ ಅನುಸರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ 29,406 ಗ್ರಾಮಗಳಿದ್ದು, ಅದರಲ್ಲಿ ಪರಿಶಿಷ್ಟ ಜಾತಿ 2,518 ಮತ್ತು ಪಂಗಡಗಳ 1,128 ಗ್ರಾಮಗಳಲ್ಲಿ ಎಸ್ಸಿ,ಎಸ್ಟಿ ಸಮುದಾಯದವರ ಸಂಖ್ಯೆ ಶೇ.50ಕ್ಕಿಂತ ಹೆಚ್ಚಿದೆ. ಹೀಗಾಗಿ ಇನ್ನು ಮುಂದೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿ ವೇಳೆ ಮೀಸಲಾತಿ ನಿಯಮ ಪಾಲಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌