
ಬೆಂಗಳೂರು, (ಫೆ.15): ರಾಜ್ಯ ಸರ್ಕಾರವು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಸಮಯವನ್ನು ವಿಸ್ತರಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಲ್ಲಿ(Sub Registrar Office) ಜನಸಂದಣೆ ಹೆಚ್ಚಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ವಿಸ್ತರಿಸಲಾಗಿದೆ.
ಇನ್ನು ಮುಂದೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳೂ ತೆರೆದಿರುತ್ತವೆ ಎಂದು ನೋಂದಣೆ ಉಪ ಮಹಾ ಪರಿವೀಕ್ಷಕರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಉಪ ನೋಂದಣಿ ಕಚೇರಿ ಕರ್ತವ್ಯದ ಸಮಯ ಪರಿಷ್ಕರಣೆ ಮಾಡಲಾಗಿದ್ದು, ಈ ಸಂಬಂಧ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದುವರೆಗೂ ನೋಂದಣಿ ಮತ್ತು ಮುದ್ರಾಂಕ ಕಚೇರಿ ಸಮಯ ಬೆಳಗ್ಗೆ 10ರಿಂದ ಸಂಜೆ 5.50ರ ವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಆದ್ರೆ, ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ವಿಸ್ತರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ