
ಬೆಂಗಳೂರು, (ಜೂನ್.28): ಜುಲೈ 5 ಭಾನುವಾರದಿಂದ ಮುಂದಿನ ಆಗಸ್ಟ್ 2 ರವರೆಗೆ ಎಲ್ಲ ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಇಂದು (ಭಾನುವಾರ) ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅಧಿಕೃತ ಆದೇಶ ಹೊರಡಿಸಿದೆ.
ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೊರೋನಾ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಜಾರಿಗೆ ಮುಂದಾಗಿರುವ ಸರ್ಕಾರ, ಪ್ರತಿ ಭಾನುವಾರ ಲಾಕ್ಡೌನ್ ಜಾರಿಗೆ ಆದೇಶ ಹೊರಡಿಸಿದೆ.
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ರೂಲ್ಸ್ ಬದಲಿಸಿದ ಸರ್ಕಾರ
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾರಮರ್ಶಿಸಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾನುವಾರ ಲಾಕ್ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ.
ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸರಕು-ಸೇವೆಗಳಿಗೆ ಅನುಮತಿ ಇರುತ್ತದೆ. ಎಲ್ಲಾ ಸರ್ಕಾರಿ ಇಲಾಖೆ ಕಚೇರಿ ನಿಗಮ ಮಂಡಳಿ ತುರ್ತು ಮತ್ತು ಅಗತ್ಯ ಸೇವೆ ಹೊರತುಪಡಿಸಿದ ಇಲಾಖೆಗಳನ್ನು ಎರಡನೇ ಶನಿವಾರ ಮತ್ತು 4ನೇ ಶನಿವಾರ ಸೇರಿ ಜುಲೈ 10 ರಿಂದ ಎಲ್ಲಾ ಶನಿವಾರ ಆಗಸ್ಟ್ 8 ರವರೆಗೆ ಮುಚ್ಚಲ್ಪಡುತ್ತದೆ.
ಅದೇ ರೀತಿ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ