ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್: 5 ಕೆಜಿ ಅಕ್ಕಿ ಜತೆಗೆ ಹಣ ನೀಡಲು ಸರ್ಕಾರ ತೀರ್ಮಾನ

Published : Jun 28, 2023, 02:56 PM ISTUpdated : Jun 29, 2023, 10:12 AM IST
ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್: 5 ಕೆಜಿ ಅಕ್ಕಿ ಜತೆಗೆ ಹಣ ನೀಡಲು ಸರ್ಕಾರ ತೀರ್ಮಾನ

ಸಾರಾಂಶ

5 ಕೆಜಿ ಅಕ್ಕಿಯ ಜತೆಗೆ ತಲಾ 1 ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡಲು ಸರ್ಕಾರ ತೀರ್ಮಾನ ಮಾಡಿದೆ.

ಬೆಂಗಳೂರು (ಜೂನ್ 28, 2023): ರಾಜ್ಯ ಸರ್ಕಾರದ ಗ್ಯಾರಂಟಿಯಾದ ಅಕ್ಕಿ ಭಾಗ್ಯಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಪ್ರತಿ ಬಿಪಿಎಲ್‌ ಕಾರ್ಡುದಾರರಿಗೂ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರ ಗ್ಯಾರಂಟಿ ನೀಡಿತ್ತು. ಆದರೆ, ಸದ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿಯ ಜತೆಗೆ ಹಣ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಜುಲೈ 1 ರಿಂದಲೇ ಇದು ಜಾರಿಗೆ ಬರಲಿದೆ. 

ಹೌದು, 5 ಕೆಜಿ ಅಕ್ಕಿಯ ಜತೆಗೆ ತಲಾ 1 ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆ ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌ ನೀಡಿದೆ ಸರ್ಕಾರ. ಸದ್ಯಕ್ಕೆ ಅಕ್ಕಿ ಕೊಡಲು ತೀರ್ಮಾನ ಮಾಡಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.

ಇದನ್ನು ಓದಿ: ಅಕ್ಕಿ ಖರೀದಿಯೇ ಆಗಿಲ್ಲ, ಅನ್ನಭಾಗ್ಯ ಯೋಜನೆ ವಿಳಂಬ ಆಗಲಿದೆ: ಆಹಾರ ಸಚಿವ ಮುನಿಯಪ್ಪ

ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಆಹಾರ ಸಚಿವ ಮುನಿಯಪ್ಪ, ಬಿಪಿಎಲ್‌ ಕಾರ್ಡುದಾರರ ಅಕೌಂಟ್‌ಗೆ ಹಣ ಹಾಕ್ತೇವೆ. ಶೇ. 99 ರಷ್ಟು ಕಾರ್ಡ್‌ದಾರರ ಬಳಿ ಅಕೌಂಟ್ ಇದೆ. ಅವರ ಅಕೌಂಟ್‌ಗೆ ಪ್ರತಿಯೊಬ್ಬರಿಗೂ 170 ರೂ. ಹಣ ನೀಡಲಾಗುತ್ತದೆ, ಕುಟುಂಬದ ಕಾರ್ಡ್ ಹೋಲ್ಡರ್‌ ಅಕೌಂಟ್‌ಗೆ ಹಣ ಹೋಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ಸಿಗುವ ತನಕ ಹಣ ನೀಡಲು ತೀರ್ಮಾನ ಮಾಡಲಾಗಿದೆ ಎಂದೂ ಅವರು ಹೇಳಿದ್ರು. 

ಅಲ್ಲದೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಹ ಮಾತನಾಡಿದ್ದು, 5 ಕೆಜಿಯ ಅಕ್ಕಿಯ ಜತೆಗೆ ಅಕ್ಕಿಯ ಹಣ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಕೊಡಲು ಆಗಲ್ಲ ಎಂದಿದೆ. ನಾವು ಪುಕ್ಕಟೆ ಕೇಳ್ತಾ ಇಲ್ಲ, ಆದರೂ ಅವರು ರಾಜಕೀಯ ಮಾಡ್ತಿದ್ದಾರೆ. ಅಕ್ಕಿ ಕೊಡುವ ಕೆಲಸಕ್ಕೆ ಕಲ್ಲು ಹಾಕ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಈ ಮೂಲಕ ಅನ್ನ ಭಾಗ್ಯಕ್ಕೆ ಸದ್ಯಕ್ಕೆ ಪರಿಹಾರ ಸಿಕ್ಕಂತಾಗಿದ್ದು, ಜುಲೈ 1 ರಿಂದ 5 ಕೆಜಿ ಅಕ್ಕಿಯ ಜತೆಗೆ ಉಳಿದ 5 ಕೆಜಿ ಅಕ್ಕಿಗೆ ಬೇಕಾದ ಹಣವನ್ನೂ ನೀಡುತ್ತದೆ. 

ಇದನ್ನೂ ಓದಿ: ಹೊರರಾಜ್ಯಗಳಿಂದ ಅಕ್ಕಿ ಖರೀದಿಸುವುದು ಕಮಿಷನ್ ಪಡೆಯುವ ಹುನ್ನಾರ: ಶಾಸಕ ಬಿ.ವೈ.ವಿಜಯೇಂದ್ರ

ಇನ್ನು, ರಾಜ್ಯ ಸರ್ಕಾರದ ಆರೋಪಕ್ಕೆ ಎಫ್‌ಸಿಐ ಈ ಹಿಂದೆಯೇ ಸ್ಪಷ್ಟನೆ ನೀಡಿತ್ತು. ಈ ಹಿಂದೆ ರಾಜ್ಯಗಳಿಗೆ ಹೆಚ್ಚುವರಿ ಆಹಾರ ಧಾನ್ಯ ಪೂರೈಕೆ ಮಾಡಲಾಗುತ್ತಿದೆ. ಇದರ ನಡುವೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಗೋಧಿ ಬೆಲೆ ಏರಿಕೆಯಾಗುತ್ತಿದೆ. ಬೆಲೆ ನಿಯಂತ್ರಿಸುವ ಅನಿವಾರ್ಯತೆ ಎದರಾಗಿದೆ.  ಪ್ರಧಾನಮಂತ್ರಿ ಗರೀಬ್ ಗಲ್ಯಾಣ ಯೋಜನೆ ಅಡಿಯಲ್ಲಿ ಆಯಾ ರಾಜ್ಯಗಳಿಗೆ ನೀಡಬೇಕಿರುವ ಅಕ್ಕಿಯನ್ನು ಯಾವುದೇ ಕೊರತೆ ಇಲ್ಲದೆ ಕೇಂದ್ರ ನೀಡುತ್ತಿದೆ. 80 ಕೋಟಿ ಜನರು ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ 80 ಕೋಟಿ ಜನರ ಬಗ್ಗೆ ಯೋಚಿಸಬೇಕು. ಈ 80 ಕೋಟಿ ಜನರ ಆಹಾರ ಧಾನ್ಯ ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ನಿಯಮ ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!