Karnataka Governer: ಮುಕ್ತ ವಿವಿ ಕಾರ್ಯಕ್ರಮ ವೇಳೆ ಯಡವಟ್ಟು; ಕೈಕೊಟ್ಟ ಲಿಫ್ಟ್, ರಾಜ್ಯಪಾಲರು ಪರದಾಟ!

Published : May 31, 2025, 07:51 PM ISTUpdated : May 31, 2025, 07:55 PM IST
Karnataka goernor stuck in lift at mysuru

ಸಾರಾಂಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯಪಾಲರು ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಓವರ್‌ಲೋಡ್ ಆದ ಲಿಫ್ಟ್‌ನಿಂದಾಗಿ ಈ ಘಟನೆ ಸಂಭವಿಸಿದ್ದು, ಭದ್ರತಾ ಲೋಪದ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮೈಸೂರು (ಮೇ.31): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದ 'ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್' ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಕರ್ನಾಟಕ ರಾಜ್ಯಪಾಲರು ಲಿಫ್ಟ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ.

ರಾಜ್ಯಪಾಲರು ಕಾರ್ಯಕ್ರಮಕ್ಕೆ ತೆರಳಲು ಲಿಫ್ಟ್ ಬಳಸಿದರು. ಈ ವೇಳೆ 6 ಮಂದಿಯ ಸಾಮರ್ಥ್ಯದ ಲಿಫ್ಟ್‌ನಲ್ಲಿ 10 ಜನರು ಪ್ರಯಾಣಿಸಿದ್ದರಿಂದ ಓವರ್‌ಲೋಡ್ ಆಗಿ ಲಿಫ್ಟ್ ಕೆಟ್ಟು ಅರ್ಧದಲ್ಲೇ ನಿಂತಿತು. ಇದರಿಂದ ರಾಜ್ಯಪಾಲರು ಕೆಲಕಾಲ ಲಿಫ್ಟ್‌ನಲ್ಲೇ ಸಿಲುಕಿದ್ದರು. ಆತಂಕಗೊಂಡ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ, ಲಿಫ್ಟ್‌ನಲ್ಲಿದ್ದ ಕೆಲ ಸಿಬ್ಬಂದಿಯನ್ನು ಕೆಳಗಿಳಿಸಿದರು.

ಬಳಿಕ, ಲಿಫ್ಟ್ ಬಳಸದೆ ರಾಜ್ಯಪಾಲರು ನಡೆದುಕೊಂಡೇ ಕಾರ್ಯಕ್ರಮಕ್ಕೆ ತೆರಳಿದರು. ಈ ಘಟನೆಯಿಂದ ಕಾರ್ಯಕ್ರಮದಲ್ಲಿ ಯಾವುದೇ ವಿಘ್ನ ಉಂಟಾಗಿಲ್ಲವಾದರೂ, ಲಿಫ್ಟ್‌ನ ಓವರ್‌ಲೋಡ್ ಸಮಸ್ಯೆ ಭದ್ರತಾ ಲೋಪವನ್ನು ಎತ್ತಿತೋರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಯ್ಯಯ್ಯೋ.. ದೆವ್ವ ಹಿಡಿದಿದೆಯೆಂದು ಗೃಹಿಣಿಯನ್ನು ಬೇವಿನ ಕಟ್ಟಿಗೆಯಿಂದ ಥಳಿಸಿ ಕೊಲೆ!
ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’: ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ