ಸಿಎಂಗೆ ಕೊರೋನಾ: ಪರೀಕ್ಷೆಗೊಳಗಾಗಿದ್ದ ರಾಜ್ಯಪಾಲ ವಜುಬಾಯ್ ವಾಲಾ ವರದಿ ಬಹಿರಂಗ

Published : Aug 03, 2020, 03:44 PM IST
ಸಿಎಂಗೆ ಕೊರೋನಾ: ಪರೀಕ್ಷೆಗೊಳಗಾಗಿದ್ದ ರಾಜ್ಯಪಾಲ ವಜುಬಾಯ್ ವಾಲಾ ವರದಿ ಬಹಿರಂಗ

ಸಾರಾಂಶ

 ಕೊರೋನಾ ದೃಢಪಟ್ಟ ಮೂರು ದಿನದ ಹಿಂದೆ ಅಷ್ಟೇ ಸಿಎಂ  ಬಿಎಸ್ ಯಡಿಯೂರಪ್ಪ ಅವರು ರಾಜ್ಯಪಾಲ ವಜುಬಾಯ್ ವಾಲಾ ಅವರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ಸಹ ಬಂದಿದೆ.

ಬೆಂಗಳೂರು, (ಆ.03): ಬಿಎಸ್ ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ರಾಜ್ಯಪಾಲ ವಜುಬಾಯ್ ವಾಲಾ ಕೋವಿಡ್ ಟೆಸ್ಟ್‌ ಮಾಡಿಸಿಕೊಂಡಿದ್ದು, ಇದೀಗ ಅವರ ವರದಿ ನೆಗೆಟಿವ್ ಅಂತ ಬಂದಿದೆ. 

ಇದರಿಂದ ರಾಜ್ಯಪಾಲ ವಜುಬಾಯ್ ವಾಲಾ ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯ ರಾಜಕೀಯ ವಿದ್ಯಾಮಾನ ಕುರಿತಂತೆ ಜುಲೈ 31ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾಗಿದ್ದರು. 

ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ಆದ್ರೆ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಕಾರಣ, ವಜುಬಾಯ್ ವಾಲಾ ಅವರೂ ಸಹ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ಅದೃಷ್ಟವಶಾತ್ ಅವರಿಗೆ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ. 

ಫೋಟೋಗಳಲ್ಲಿ ನೋಡಿದ್ರೆ  ಸಿಎಂ ಭೇಟಿ ವೇಳೆ ರಾಜ್ಯಪಾಲರು ಮಾಸ್ಕ್ ಧರಿಸಿದ್ದರು. ಅಷ್ಟೇ ಅಲ್ಲದೇ ಅಂತರ ಕಾಯ್ದುಕೊಂಡೇ ಚರ್ಚೆ ಮಾಡಿದ್ದಾರೆ. ಈ ಹಿನ್ನೆಲೆ ವಜುಬಾಯ್ ವಾಲಾ ಅವರಿಗೆ ಸೋಂಕು ತಾಗಿಲ್ಲ ಎನ್ನಬಹುದು.

ಇನ್ನು ಬಿಎಸ್‌ವೈ ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಥಮಿಕ ಸಂಪರ್ಕಿತರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅದರಂತೆ ಸಂಪರ್ಕದಲ್ಲಿದ್ದವರಲ್ಲಿ ಕೆಲವರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!