ಪುಂಡರ ಕಡಿವಾಣಕ್ಕೆ ಕರ್ನಾಟಕದಲ್ಲಿ ಬಂತು ಸುಗ್ರೀವಾಜ್ಞೆ: ಇನ್ನೇನಿದ್ರೂ ದಂಡಂ ದಶಗುಣಂ

By Suvarna NewsFirst Published Apr 22, 2020, 9:44 PM IST
Highlights

ಒಳ್ಳೆ ಮಾತಿನಿಂದ ಹೇಳಿದ್ರೆ ಯಾರು ಮಾತು ಕೇಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪುಂಡರನ್ನು ಮಟ್ಟಹಾಕಲು ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದೆ. ಇನ್ಮುಂದೆ ಏನಾದ್ರೂ ಕೊರೋನಾ ವಾರಿಯರ್ಸ್‌ ಮೇಲೆ ಕೈ ಮಾಡಿದ್ರೆ  'ಅಲ್ಲೇ ಡ್ರಾ ಅಲ್ಲೇ ಬಹುಮಾನ' 

ಬೆಂಗಳೂರು, (ಏ.22): ಕರ್ನಾಟಕದಲ್ಲಿ ಡಾಕ್ಟರ್ಸ್, ಪೊಲೀಸ್ರು ಮನೆ-ಮಠ ಬಿಟ್ಟು ಹಗಲಿರುಳು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.

ಇದರ ಮಧ್ಯೆ ಪುಂಡರ ಕಾಟವೂ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಪದೇ-ಪದೇ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಇದರಿಂದ ಉತ್ತರ ಪ್ರದೇಶ ಹಾಗೂ ಕೇರಳ ಮಾದರಿಯ ಕಠಿಣ ಕ್ರಮ ಜಾರಿಯಾಗಬೇಕು ಎನ್ನುವ ಕೂಗು ಎದ್ದಿತ್ತು.

ಇದೀಗ ಆ ಕೂಗಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪುಂಡರನ್ನು ಮಟ್ಟಹಾಕಲು ಸುಗ್ರೀವಾಜ್ಞೆ ಹೊರಡಿಸಿದೆ.  ಇಂದು (ಬುಧವಾರ) ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ ಬಿದ್ದಿದೆ.

ಕೊರೊನಾ ವಾರಿಯರ್ಸ್ ರಕ್ಷಣೆಗೆ ಮುಂದಾದ ಕೇಂದ್ರ; ಸುಗ್ರೀವಾಜ್ಞೆ ಜಾರಿಗೆ

ಹೀಗಾಗಿ ಇನ್ಮುಂದೆ ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಉಂಟುಮಾಡಿದವರಿಗೆ ಶಿಕ್ಷೆ ಫಿಕ್ಸ್.

ರಾಜ್ಯ ಸರ್ಕಾರ ಕೊರೋನಾ ವಾರಿಯರ್ಸ್ ಗೆ ರಕ್ಷಣೆ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಸಾಂಕ್ರಾಮಿಕ ಕಾಯ್ದೆಗೆ ತಿದ್ದಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. 

ಸುಗ್ರೀವಾಜ್ಞೆ ಏನು ಹೇಳುತ್ತೆ...?
* ಸಾಂಕ್ರಾಮಿಕ ರೋಗದ ತಡೆಗಟ್ಟಲು ಸರ್ಕಾರಿ ನೌಕರರ ಮಾಡುವ ಕೆಲಸಕ್ಕೆ ಅಡ್ಡಿಪಡಿಸುವಂತಿಲ್ಲ.
* ವಾರಿಯರ್ಸ್ ಗಳ ಕ್ರಮಕ್ಕೆ ತಡೆಯೊಡ್ಡಿದರೆ ಕನಿಷ್ಟ ಮೂರು ವರ್ಷಗಳ ಕಾಲ ಜೈಲುವಾಸ.
* ಮೂರು ವರ್ಷಗಳ ಜೈಲುಶಿಕ್ಷೆಯ ಜೊತೆಗೆ 50 ಸಾವಿರ ರೂಪಾಯಿ ದಂಡ.
* ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟು ಮಾಡಿದ್ರೆ ಕನಿಷ್ಟ 6 ತಿಂಗಳು ಗರಿಷ್ಠ ಮೂರು ವರ್ಷ ಜೈಲು.
* ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟದ ಎರಡು ಪಟ್ಟು ದಂಡ ವಿಧಿಸಲು ಅಧಿಕಾರ.
* ದಂಡ ವಸೂಲಾತಿಗಾಗಿ ಆರೋಪಿತನ ಆಸ್ತಿಪಾಸ್ತಿ ಜಪ್ತಿ ಮಾಡಲು ಅವಕಾಶ.
* ಅಪರಾಧ ಎಸಗಲು ಪ್ರೇರಣೆ ನೀಡಿದರೆ 2 ವರ್ಷಗಳ ಕಾಲ ಜೈಲುಶಿಕ್ಷೆ ಮತ್ತು 10 ಸಾವಿರ ರೂ ದಂಡ.
* ಆರೋಪಿತನಿಗೆ ಪ್ರಕರಣ ಸಂಬಂಧ ಜಾಮೀನು ಪಡೆಯಲು ಅವಕಾಶ.
* ವಾರಿಯರ್ಸ್ ಆಗಿರುವ ಎಲ್ಲಾ ವ್ಯಕ್ತಿಗಳು ಸಹ ಸಾರ್ವಜನಿಕ ನೌಕರ ಎಂದು ಪರಿಗಣನೆ.
* ಆರೋಪಿತರು ಎಂದು ಗುರುತಿಸಲ್ಪಟ್ಟ ಕಂಪನಿಯಾಗಿದ್ದರೆ, ಕಂಪನಿಯ ಮುಖ್ಯಸ್ಥನ ವಿರುದ್ಧ ಕೇಸ್.

click me!