ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಪಾವತಿಸಲು ಶೇ.50 ಡಿಸ್ಕೌಂಟ್; 20 ದಿನ ಮಾತ್ರ ಅವಕಾಶ!

Published : Aug 21, 2025, 06:57 PM IST
Bengaluru Traffic Rules Violation

ಸಾರಾಂಶ

ಸೆಪ್ಟೆಂಬರ್ 12 ರವರೆಗೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50 ರಿಯಾಯಿತಿ ಘೋಷಿಸಲಾಗಿದೆ. ಫೆಬ್ರವರಿ 11, 2023 ರವರೆಗಿನ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯಿಸುತ್ತದೆ. ಆನ್‌ಲೈನ್ ಅಥವಾ ಸಂಚಾರ ಪೊಲೀಸ್ ಕಚೇರಿಗಳಲ್ಲಿ ದಂಡ ಪಾವತಿಸಬಹುದು.

ಬೆಂಗಳೂರು (ಆ.21): ರಾಜ್ಯದಲ್ಲಿ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಿದೆ. ಈ ಅವಕಾಶವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಯಾರಿಗೆ ರಿಯಾಯಿತಿ ಅನ್ವಯ?

ಸಾರಿಗೆ ಇಲಾಖೆ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, 2023ರ ಫೆಬ್ರವರಿ 11 ರವರೆಗೆ ದಾಖಲಾಗಿರುವ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ. ಈ ಅವಧಿಯ ನಂತರ ದಾಖಲಾದ ಪ್ರಕರಣಗಳಿಗೆ ರಿಯಾಯಿತಿ ಸಿಗುವುದಿಲ್ಲ. ರಾಜ್ಯದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಬಾಕಿ ಇರುವ ದಂಡವನ್ನು ಪಾವತಿಸಲು ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ಹಿಂದೆ ಇದೇ ರೀತಿಯ ರಿಯಾಯಿತಿ ನೀಡಿದಾಗ, ಲಕ್ಷಾಂತರ ವಾಹನ ಸವಾರರು ಇದರ ಪ್ರಯೋಜನ ಪಡೆದಿದ್ದರು. ಬಾಕಿ ಉಳಿದಿರುವ ದಂಡವನ್ನು ಪಾವತಿಸಲು ಇದು ಮತ್ತೊಂದು ಉತ್ತಮ ಅವಕಾಶವಾಗಿದ್ದು, ನಿಗದಿತ ಅವಧಿಯೊಳಗೆ ದಂಡ ಪಾವತಿಸಿ ರಿಯಾಯಿತಿಯ ಲಾಭ ಪಡೆಯುವಂತೆ ಸಾರಿಗೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಂಡವನ್ನು ಆನ್‌ಲೈನ್ ಪೋರ್ಟಲ್‌ಗಳು ಅಥವಾ ಸಂಚಾರ ಪೊಲೀಸ್ ಕಚೇರಿಗಳಲ್ಲಿ ಪಾವತಿಸಬಹುದು.

ಪೊಲೀಸರ ಕೈಗೆ ಸಿಕ್ಕರೆ ಪೂರ್ಣ ದಂಡ: ಸರ್ಕಾರದಿಂದ ರಿಯಾಯಿತಿ ಅವಧಿ ಮುಗಿದ ನಂತರ ನೀವು ದಂಡ ಪಾವತಿ ಮಾಡದೇ ಪೊಲೀಸರ ಕೈಗೆ ಸಿಕ್ಕಲ್ಲಿ ನಿಮ್ಮ ವಾಹನದ ಸಂಚಾರ ನಿಯಮ ಉಲ್ಲಂಘನೆಗೆ ಪೂರ್ಣ ಪ್ರಮಾಣದ ಹಣವನ್ನು ವಸೂಲಿ ಮಾಡಲಾಗುತ್ತದೆ. ಇನ್ನು ನೀವು ದಂಡ ಪಾವತಿ ಮಾಡದಿದ್ದಲ್ಲಿ ಜಪ್ತಿ ಮಾಡಲಾಗುತ್ತದೆ. ಆಗ ಕೋರ್ಟ್‌ಗೆ ಹೋಗಿ ದಂಡ ಪಾವತಿಸಿ ನಿಮ್ಮ ವಾಹನವನ್ನು ಬಿಡಿಸಿಕೊಂಡು ಬರಬೇಕಾಗುತ್ತದೆ. ಹೀಗಾಗಿ, ಸರ್ಕಾರದಿಂದ ಶೇ.50 ರಿಯಾಯಿತಿ ಘೋಷಣೆ ಮಾಡಿದ್ದು, ಈಗಲೇ ದಂಡ ಪಾವತಿ ಮಾಡುವಂತೆ ಸಂಚಾರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಇಲಾಖೆ ಸಿಬ್ಬಂದಿಯಿಂದಲೂ ವಾಹನ ತಪಾಸಣೆ: ಸರ್ಕಾರದ ಆದೇಶದ ಅನ್ವಯ ವಾಹನಗಳ ಆರ್‌ಸಿ ತಪಾಸಣೆ, ಲೈಸೆನ್ಸ್ ಹಾಗೂ ಇತರೆ ವಾಹನ ಸಂಚಾರದ ಸಂಬಂಧಿತ ದಾಖಲೆಗಳನ್ನು ಪರಿಶೀಲನೆ ಮಾಡುವುದಕ್ಕೆ ಸಂಚಾರ ಇಲಾಖೆ ಸಾರಿಗೆ ಇಲಾಖೆ ಸಿಬ್ಬಂದಿಗೂ ಅವಕಾಶ ನೀಡಲಾಗಿದೆ. ಈಗ ಕೇವಲ ಸಂಚಾರಿ ವಿಭಾಗದ ಪೊಲಿಸರಷ್ಟೇ ಅಲ್ಲ, ಸಾರಿಗೆ ಇಲಾಖೆ ಸಿಬ್ಬಂದಿಯೂ ನಿಮ್ಮ ವಾಹನಗಳನ್ನು ಸೀಜ್ ಮಾಡಬಹುದು. ಜೊತೆಗೆ, ಸರ್ಕಾರದ ನಿಯಮಾವಳಿಯಂತೆ ದಂಡವನ್ನೂ ವಿಧಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್