
ಬೆಂಗಳೂರು (ಸೆ.01): ಕೊರೋನಾ ಸೋಂಕು ನಿಯಂತ್ರಣ ಕಾರ್ಯಗಳಿಗೆ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಬಿಬಿಎಂಪಿ ಹಾಗೂ 24 ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ 85 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ.
ಇದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಅತಿ ಹೆಚ್ಚು 25 ಕೋಟಿ ರು, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗೆ ತಲಾ 5 ಕೋಟಿ ರು, ಉಳಿದ ಜಿಲ್ಲೆಗಳಿಗೆ ಕನಿಷ್ಠ 1 ಕೋಟಿಯಿಂದ 3 ಕೋಟಿ ವರೆಗೆ ಅನುದಾನ ಬಿಡುಗಡೆ ಮಾಡಿದೆ.
ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯ (ಎಸ್ಡಿಆರ್ಎಫ್) ಶೇ.50ರಷ್ಟುಹಣ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು.
ಕರ್ನಾಟಕದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: 6 ಲಕ್ಷ ಗಡಿದಾಟಿದ ಸೋಂತರ ಸಂಖ್ಯೆ ..
ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ (ವಿಪ್ಪತ್ತು ನಿರ್ವಹಣೆ) ಮೂಲಕ ಎಸ್ಡಿಆರ್ಎಫ್ ನಿಂದ ಮಾಚ್ರ್ನಲ್ಲಿ ವಿವಿಧ ಜಿಲ್ಲೆಗಳಿಗೆ 236 ಕೋಟಿ ರು, ಮೇ ತಿಂಗಳಲ್ಲಿ 50 ಕೋಟಿ ರು ಬಿಡುಗಡೆ ಮಾಡಿತ್ತು. ಈಗ ಹೆಚ್ಚುವರಿಯಾಗಿ ಇನ್ನೂ 85 ಕೋಟಿ ರು ಬಿಡುಗಡೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ