ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ಸರ್ಕಾರ ಘೋಷಿಸಿದೆ. ಇದರಲ್ಲಿ ನಿಮ್ಮ ತಾಲೂಕು ಇದ್ಯಾ ಎನ್ನುವುದನ್ನು ನೋಡಿಕೊಳ್ಳಿ
ಬೆಂಗಳೂರು, [ಅ.28]: 2019-20ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆ ಎದುರಿಸಿದ ರಾಜ್ಯದ 49 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ರಾಜ್ಯ ಸರ್ಕಾರ ಇಂದು [ಸೋಮವಾರ] ಅಧಿಕೃತವಾಗಿ ಘೋಷಣೆ ಮಾಡಿದೆ.
2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ತಿಳಿಸಿದೆ.
ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.
ಆನೇಕಲ್, ಬೆಂಗಳೂರು ಉತ್ತರ, ಪೂರ್ವ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಕನಕಪುರ, ರಾಮನಗರ, ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುರುವೇಕೆರೆ, ತುಮಕೂರು, ಚಳ್ಳೇಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ಜಗಳೂರು, ಕೊಳ್ಳೇಗಾಲ, ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ, ಗಂಗಾವತಿ, ಮಾನ್ವಿ, ರಾಯಚೂರು, ಸಿಂಧನೂರು ಹಾಗೂ ಚಿಂಚೋಳಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.