ರಾಜ್ಯದ 49 ತಾಲೂಕುಗಳು ಬರಪೀಡಿತವೆಂದು ಘೋಷಿಸಿದ ಸರ್ಕಾರ: ನಿಮ್ ತಾಲೂಕು ಇದ್ಯಾ..?

Published : Oct 28, 2019, 10:29 PM IST
ರಾಜ್ಯದ 49 ತಾಲೂಕುಗಳು ಬರಪೀಡಿತವೆಂದು ಘೋಷಿಸಿದ ಸರ್ಕಾರ: ನಿಮ್ ತಾಲೂಕು ಇದ್ಯಾ..?

ಸಾರಾಂಶ

ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.  ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ಸರ್ಕಾರ ಘೋಷಿಸಿದೆ. ಇದರಲ್ಲಿ ನಿಮ್ಮ ತಾಲೂಕು ಇದ್ಯಾ ಎನ್ನುವುದನ್ನು ನೋಡಿಕೊಳ್ಳಿ

ಬೆಂಗಳೂರು, [ಅ.28]: 2019-20ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆ ಎದುರಿಸಿದ ರಾಜ್ಯದ  49 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. 

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ರಾಜ್ಯ ಸರ್ಕಾರ ಇಂದು [ಸೋಮವಾರ] ಅಧಿಕೃತವಾಗಿ ಘೋಷಣೆ ಮಾಡಿದೆ.

 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ತಿಳಿಸಿದೆ.

ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.

ಆನೇಕಲ್​, ಬೆಂಗಳೂರು ಉತ್ತರ, ಪೂರ್ವ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಕನಕಪುರ, ರಾಮನಗರ, ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ಗುಬ್ಬಿ, ಕೊರಟಗೆರೆ, ಕುಣಿಗಲ್​, ಮಧುಗಿರಿ, ಪಾವಗಡ, ತುರುವೇಕೆರೆ, ತುಮಕೂರು, ಚಳ್ಳೇಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ಜಗಳೂರು, ಕೊಳ್ಳೇಗಾಲ, ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ, ಗಂಗಾವತಿ, ಮಾನ್ವಿ, ರಾಯಚೂರು, ಸಿಂಧನೂರು ಹಾಗೂ ಚಿಂಚೋಳಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!