ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್

Published : Dec 09, 2020, 09:25 AM IST
ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್

ಸಾರಾಂಶ

ರಾಜ್ಯದ ರೈತರಿಗೆ ಕರ್ನಾಟಕ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಬೆಂಬಲ ಬೆಲೆಯಡಿ ಖರೀದಿ ಮಾಡುವ ಬಗ್ಗೆ ಸಚಿವರು ತಿಳಿಸಿದ್ದಾರೆ

ವಿಧಾನಸಭೆ (ಡಿ.09):  ಈ ಬಾರಿ ರೈತರಿಂದ 2.5 ಲಕ್ಷ ಟನ್‌ ಭತ್ತ ಮತ್ತು 3 ಲಕ್ಷ ಟನ್‌ ರಾಗಿ ಬೆಳೆಯನ್ನು ಬೆಂಬಲ ಬೆಲೆ ನೀಡಿ ಖರೀದಿಗೆ ಅನುಮತಿ ನೀಡಲಾಗಿದ್ದು, ಕೂಡಲೇ ಈ ಬೆಳೆಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಕುರಿತು ನಡೆದ ಚರ್ಚೆಯ ಬಳಿಕ ಉತ್ತರ ನೀಡಿದ ಅವರು, ಹಿಂದಿನ ವರ್ಷದ ಖರೀದಿ ಸಾಮರ್ಥ್ಯದ ಆಧಾರದ ಮೇಲೆ ಈ ಬಾರಿ 2.10 ಲಕ್ಷ ಟನ್‌ ಭತ್ತ ಮತ್ತು 3 ಲಕ್ಷ ಟನ್‌ ರಾಗಿಯನ್ನು ಬೆಂಬಲ ಬೆಲೆ ನೀಡಿ ರೈತರಿಂದ ಖರೀದಿ ಮಾಡಲು ನಿರ್ಧರಿಸಲಾಗಿದೆ. ನ.1ರಿಂದ ನೋಂದಣಿ ಆರಂಭಿಸಿ ಡಿ.1ರಿಂದಲೇ ಖರೀದಿ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ, ಅಧಿಕಾರಿಗಳ ತಪ್ಪು ಗ್ರಹಿಕೆಯಿಂದ ಡಿ.1ರಿಂದ ನೋಂದಣಿ ಆರಂಭವಾಗಿದೆ. ಇದನ್ನು ಸರಿಪಡಿಸಲು ಕೂಡಲೇ ಖರೀದಿಯನ್ನೂ ಆರಂಭಿಸಲಾಗುವುದು ಎಂದು ತಿಳಿಸಿದರು.

'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು' ಪಾಟೀಲರ ಬಿಸಿ ಹೇಳಿಕೆ! ..

ಪ್ರತಿ ಕ್ವಿಂಟಾಲ್‌ಗೆ ಸಾಮಾನ್ಯ ಭತ್ತಕ್ಕೆ ಕೇಂದ್ರ ಸರಕಾರ ನಿಗದಿ ಮಾಡಿರುವ 1,868 ರು. ಹಾಗೂ ಗ್ರೆಡ್‌-1 ಭತ್ತಕ್ಕೆ 1,888 ರು. ನೀಡಲಾಗುತ್ತದೆ. ಪ್ರತಿ ರೈತರಿಂದ ಎಕರೆಗೆ 16 ಕ್ವಿಂಟಾಲ್‌ನಂತೆ ಗರಿಷ್ಠ 70 ಕ್ವಿಂಟಾಲ್‌ ಭತ್ತ ಖರೀದಿ ಮಾಡಲಾಗುತ್ತದೆ. ಬೆಂಬಲ ಬೆಲೆ ದಾಸ್ತಾನುದಾರರು ದುರುಪಯೋಗಪಡಿಸಿಕೊಳ್ಳಬಾರದೆಂಬ ರೈತರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕೆ ಎಕರೆ ಮಿತಿ ವಿಧಿಸಲಾಗಿದೆ. ಆದರೆ, ಹೆಚ್ಚಿನ ಭೂಮಿ ಇರುವ ರೈತರು ತರುವ ಭತ್ತವನ್ನೂ ಖರೀದಿ ಮಾಡುತ್ತೇವೆ ಎಂದರು.

ಮೂಲ ಬೆಲೆ ಹೆಚ್ಚಿಸಿರುವುದರಿಂದ ಈ ಬಾರಿ ಬೆಂಬಲ ಬೆಲೆ ಕಡಿಮೆ ಮಾಡಲಾಗಿದೆ. ಖರೀದಿ ಕೇಂದ್ರಗಳಿಗೆ ಹೆಚ್ಚು ಭತ್ತದ ದಾಸ್ತಾನು ಬಂದರೆ ಖರೀದಿ ಮಿತಿಯನ್ನು 3 ಲಕ್ಷ ಟನ್‌ಗೆ ಹೆಚ್ಚಿಸಲಾಗುವುದು. ಕೇಂದ್ರದ ಅನುಮತಿಯಂತೆ ಮುಂದಿನ ಮೂರು ತಿಂಗಳ ಕಾಲ ಕೃಷಿ ಬೆಳೆ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಇನ್ನೂ ಒಂದು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಹೆಚ್ಚುವರಿ 1 ಲಕ್ಷ ಟನ್‌ನಷ್ಟುಭತ್ತ ಖರೀದಿಗೆ ಅನುಮತಿ ನೀಡುವಂತೆಯೂ ಮನವಿ ಮಾಡಲಾಗಿದೆ ಎಂದರು.

ಮುಂದಿನ ವರ್ಷದಿಂದ ಹೆಸರು, ಉದ್ದಿನ ಕಾಳು ಖರೀದಿಗೆ ಜುಲೈ ಆಗಸ್ಟ್‌ನಿಂದಲೇ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೊಲೀಸರು ಮಾಡಬೇಕಾದ ಕೆಲಸ ಹಿಂದೂ ಕಾರ್ಯಕರ್ತರು ಮಾಡುತ್ತಿದ್ದಾರೆ; ಫ್ರೀಡಂ ಪಾರ್ಕ್‌ನಲ್ಲಿ ವಸಂತ್ ಗಿಳಿಯಾರ್ ಹೇಳಿದ್ದೇನು?
Priyank kharge: ರಜಾಕಾರರ ದಾಳಿಯಿಂದ ನಮ್ಮನ್ನು ರಕ್ಷಿಸಿದ್ದು ನೆಹರು, ಪಟೇಲ್ ಹೊರತು ಆರೆಸ್ಸೆಸ್ ಅಲ್ಲ: ಪ್ರಿಯಾಂಕ್‌