ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸಿದ ರಾಜ್ಯ ಸರ್ಕಾರ

Published : Oct 15, 2019, 08:53 PM ISTUpdated : Oct 15, 2019, 09:11 PM IST
ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸಿದ ರಾಜ್ಯ ಸರ್ಕಾರ

ಸಾರಾಂಶ

ಒಟ್ಟು 3 ಪ್ರಾಧಿಕಾರ ಮತ್ತು 13 ಅಕಾಡೆಮಿಗಳಿಗೆ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯರಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವ ಅಕಾಡೆಮಿಗೆ ಯಾರು ಅಧ್ಯಕ್ಷರು? ಪಟ್ಟಿ ಈ ಕೆಳಗಿನಂತಿದೆ.

ಬೆಂಗಳೂರು, [ಅ.15]: ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷ ಹಾಗೂ ಸದಸ್ಯರನ್ನ ನೇಮಕ ಮಾಡಲಾಗಿದೆ.

ಒಟ್ಟು 3 ಪ್ರಾಧಿಕಾರ ಮತ್ತು 13 ಅಕಾಡೆಮಿಗಳಿಗೆ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯರಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು [ಮಂಗಳವಾರ] ಆದೇಶ ಹೊರಡಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಟಿ.ಎಸ್ ನಾಗಾಭರಣ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಯಾವ ಅಕಾಡೆಮಿಗೆ ಯಾರು ಅಧ್ಯಕ್ಷರಾಗಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

* ಮೂರು ಪ್ರಾಧಿಕಾರದ ಅಧ್ಯಕ್ಷರು

1. ಕನ್ನಡ ಅಭಿವೃದ್ದಿ ಪ್ರಾಧಿಕಾರ- ಟಿ. ಎಸ್ ನಾಗಾಭರಣ

2.ಕುವೆಂಪು ಭಾಷಾ ಭಾರತಿ ಪ್ರಾಧಿಕಾರ- ಅಜರ್ಕಳ ಗಿರೀಶ್ ಭಟ್

3. ಕನ್ನಡ ಪುಸ್ತಕ ಪ್ರಾಧಿಕಾರ - ಡಾ. ಎಂ.ಎನ್ ನಂದೀಶ್ ಹಂಜೆ

* 13 ಅಕಾಡೆಮಿ ಅಧ್ಯಕ್ಷರುಗಳ ಹೆಸರುಗಳು
1. ಕನ್ನಡ ಸಾಹಿತ್ಯ ಅಕಾಡೆಮಿ - ಡಾ. ಬಿ.ವಿ ವಸಂತ ಕುಮಾರ್

2. ಕರ್ನಾಟಕ ನಾಟಕ ಅಕಾಡೆಮಿ - ಭೀಮಸೇನ

3. ಕರ್ನಾಟಕ ಸಂಗೀತ- ನೃತ್ಯ ಅಕಾಡೆಮಿ - ಆನೂರು ಅನಂತ ಕೃಷ್ಣ ಶರ್ಮ

4. ಕರ್ನಾಟಕ ಶಿಲ್ಪಕಲಾ ಅಕಾಡೆಮಿ - ವೀರಣ್ಣ ಅರ್ಕಸಾಲಿ

5. ಕರ್ನಾಟಕ ಲಲಿತಾ ಕಲಾ ಅಕಾಡೆಮಿ - ಡಿ. ಮಹೇಂದ್ರ

6. ಕರ್ನಾಟಕ ಯಕ್ಷಗಾನ ಅಕಾಡೆಮಿ- ಪ್ರೊ. ಎಂ.ಎ ಹೆಗ್ಡೆ

7. ಕರ್ನಾಟಕ ಜಾನಪದ ಅಕಾಡೆಮಿ- ಮಂಜಮ್ಮ ಜೋಗತಿ

8. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ- ದಯಾನಂದ ಕತ್ತಲಸರ

9. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ- ಡಾ. ಪಾರ್ವತಿ ಅಪ್ಪಯ್ಯ

10. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ - ಡಾ. ಜಗದೀಶ್ ಪೈ

11. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ - ರಹೀಂ ಉಚ್ಚಿಲ

12. ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ - ಲಕ್ಷ್ಮೀ ನಾರಾಯಣ ಕಜೆಗದ್ದೆ

13. ಕರ್ನಾಟಕ ಬಯಲಾಟ ಅಕಾಡೆಮಿ - ಸೊರಬಕ್ಕನವರ್ ಹಾವೇರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ