
ಬೆಂಗಳೂರು, (ಫೆ.26): ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ ತಗುಲಿ ಅರಣ್ಯ ನಾಶವಾಗಿದೆ. ಇದ್ರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೊಸ ಅಧಿಕಾರಿಯನ್ನು ನೇಮಿಸಿದೆ.
ಬಂಡೀಪುರದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಟಿ.ಬಾಲಚಂದ್ರ ಅವರನ್ನ ನೇಮಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಕೆ.ನಾಗವೇಣಿ ಆದೇಶ ಹೊರಡಿಸಿದ್ದಾರೆ.
ಬಂಡೀಪುರ ರೋದನೆ: ಇದು ಕಾಡ್ಗಿಚ್ಚು ಅಲ್ಲ? ಫೋಟೋದಲ್ಲಿ ಬಯಲಾಯ್ತು ಕರಾಳ ಸತ್ಯ
ಕಳೆದ ನಾಲ್ಕಾರು ದಿನಗಳಿಂದ ಬಂಡೀಪುರದಲ್ಲಿ ಕಾಡ್ಗಿಚ್ಚು ಉಂಟಾಗಿ ಅರಣ್ಯ ಹೊತ್ತಿ ಉರಿಯುತ್ತಿದೆ. ಆದ್ರೆ ಇದರ ನಿರ್ವಹಣೆಗೆ ಪೂರ್ಣ ಪ್ರಮಾಣದ ಅರಣ್ಯ ಸಂರಕ್ಷಣಾಧಿಕಾರಿ ಇಲ್ಲ. ತಾತ್ಕಾಲಿಕವಾಗಿ ಅಂಬಾಡಿ ಮಾಧವನ್ ಅವರು ಕಾರ್ಯನಿರ್ವಹಿಸುತ್ತಿದ್ದರು.
ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣ ಅರಣ್ಯ ನಾಶವಾಗಿದ್ದು, ಸೇನಾ ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ