
ಬೆಂಗಳೂರು (ಅ.09): ರಾಜ್ಯದ ಲಕ್ಷಾಂತರ ಮಹಿಳಾ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ಸಚಿವ ಸಂಪುಟವು ರಾಜ್ಯದಲ್ಲಿ ಸರ್ಕಾರಿ, ಖಾಸಗಿ, ಖಾರ್ಖಾನೆ, ಗಾರ್ಮೆಂಟ್ಸ್ ಸೇರಿ ವಿವಿಧೆಡೆ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ 'ವೇತನ ಸಹಿತ ಋತುಚಕ್ರ ರಜೆ ನೀತಿ' (Karnataka Govt menstrual Leave for women policy) ಜಾರಿಗೆ ಅನುಮೋದನೆ ನೀಡಿದೆ. ಈ ಐತಿಹಾಸಿಕ ನಿರ್ಧಾರದ ಪ್ರಕಾರ, ಮಹಿಳೆಯರು ತಮ್ಮ ಋತುಚಕ್ರದ ಅವಧಿಯಲ್ಲಿ ವರ್ಷಕ್ಕೆ 12 ದಿನಗಳವರೆಗೆ (ತಿಂಗಳಿಗೆ ಒಂದು ದಿನ) ರಜೆ ಪಡೆಯಲು ಅವಕಾಶ ಲಭ್ಯವಾಗಿದೆ.
ಈ ಕುರಿತು ಮಾಹಿತಿ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, 'ಮಹಿಳೆಯರು ಸಮಾಜದಲ್ಲಿ ಸಾಕಷ್ಟು ಮಹತ್ವದ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಅವರ ಆರೋಗ್ಯ ಮತ್ತು ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಈ ಐತಿಹಾಸಿಕ ತೀರ್ಮಾನ ಕೈಗೊಂಡಿದೆ ಎಂದರು.
ಸಚಿವ ಲಾಡ್ ಅವರ ಹೇಳಿಕೆಯ ಪ್ರಮುಖ ಅಂಶಗಳು ಹೀಗಿವೆ:
ಸರ್ಕಾರದ ಈ ನಿರ್ಧಾರವನ್ನು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವು ಮುಕ್ತವಾಗಿ ಸ್ವಾಗತಿಸಿದೆ. ಸಂಘದ ಅಧ್ಯಕ್ಷೆ ರೋಷಿನಿಗೌಡ ಅವರು ಪ್ರತಿಕ್ರಿಯೆ ನೀಡಿ, ‘ಇದು ಸರ್ಕಾರ ತೆಗೆದುಕೊಂಡಿರುವ ಬಹಳ ಐತಿಹಾಸಿಕ ತೀರ್ಮಾನ. ಈ ನಿರ್ಧಾರ ನಮಗೆ ಬಹಳ ಹೆಮ್ಮೆಯ ಸಂಗತಿಯಾಗಿದೆ. ಸಂಘವು ಬಹಳ ವರ್ಷಗಳಿಂದ ಈ ಋತುಚಕ್ರ ರಜೆ ನೀತಿಗಾಗಿ ಹೋರಾಟ ನಡೆಸುತ್ತಾ ಬಂದಿತ್ತು, ಹಲವು ಸಭೆಗಳ ಮೂಲಕ ಸರ್ಕಾರದ ಗಮನ ಸೆಳೆಯಲಾಗಿತ್ತು. ’ನಮ್ಮ ಸಂಘಟನೆಯ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನಮ್ಮ ಶುಭಾಶಯಗಳು ಎಂದು ರೋಷಿನಿಗೌಡ ತಿಳಿಸಿದರು.
ಈ ಮೂಲಕ ಕರ್ನಾಟಕ ರಾಜ್ಯವು ಬಿಹಾರ, ಒರಿಸ್ಸಾ, ಕೇರಳ ರಾಜ್ಯಗಳ ಮಾದರಿಯನ್ನು ಅನುಸರಿಸಿ ಮಹಿಳಾ ಪರವಾದ ರಜೆ ನೀತಿಯನ್ನು ಜಾರಿಗೆ ತಂದಿದೆ. ಇಡೀ ಮಹಿಳಾ ಸಮೂದಾಯ ಸರ್ಕಾರದ ಈ ಪ್ರಗತಿಪರ ತೀರ್ಮಾನವನ್ನು ಸ್ವಾಗತಿಸಿದೆ. ಈ ಹೊಸ ಕಾನೂನು ರಾಜ್ಯದ ಲಕ್ಷಾಂತರ ಮಹಿಳೆಯರ ಕೆಲಸದ ಪರಿಸರ ಮತ್ತು ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ