ರಾಜ್ಯದ 130 ತಾಲೂಕು ನೆರೆಪೀಡಿತ ಎಂದು ಘೋಷಣೆ

Kannadaprabha News   | Asianet News
Published : Sep 11, 2020, 09:25 AM IST
ರಾಜ್ಯದ 130 ತಾಲೂಕು ನೆರೆಪೀಡಿತ ಎಂದು ಘೋಷಣೆ

ಸಾರಾಂಶ

ಆಗಸ್ಟ್‌ ತಿಂಗಳಲ್ಲಿ ಸುರಿದ ಮಹಾಮಳೆಗೆ ಸಿಲುಕಿದ್ದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿಹಾಗೂ ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 

ಬೆಂಗಳೂರು (ಸೆ.11):  ರಾಜ್ಯದಲ್ಲಿ ಆಗಸ್ಟ್‌ ತಿಂಗಳಲ್ಲಿ ಸುರಿದ ಮಹಾಮಳೆಗೆ ಸಿಲುಕಿದ್ದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿಹಾಗೂ ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಆಗಸ್ಟ್‌ ತಿಂಗಳಲ್ಲಿ ರಾಜ್ಯದಲ್ಲಿ ಸುರಿದ ಮಹಾಮಳೆ ಹಾಗೂ ಮಹಾರಾಷ್ಟ್ರದಲ್ಲಿನ ಕೃಷ್ಣಾ ಕಣಿವೆ ಜಲಾಶಯಗಳು ತುಂಬಿ ಹರಿದಿದ್ದರಿಂದ ಉಂಟಾದ ಪ್ರವಾಹ ಪರಿಸ್ಥಿತಿ ಹಾಗೂ ಇದೇ ಅವಧಿಯಲ್ಲಿ ರಾಜ್ಯದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಉಂಟಾದ ಪ್ರವಾಹಕ್ಕೆ ಸಿಲುಕಿ 130 ತಾಲೂಕುಗಳಲ್ಲಿ ನೆರೆ ಹಾನಿ ಉಂಟಾಗಿದೆ. ಜೀವ ಹಾನಿ, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ.

ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ ...

ಹೀಗಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋುತುವಿನಲ್ಲಿ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿಪೀಡಿತ ಎಂದು ಘೋಷಿಸಿದೆ. ಈ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್‌ ಹಾಗೂ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಹಾಗೂ ಸರ್ಕಾರ ಹೊರಡಿಸುವ ಆದೇಶಗಳ ಅನ್ವಯ ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಕಂದಾಯ ಇಲಾಖೆ ಸೂಚನೆ ನೀಡಿದೆ.

23 ಜಿಲ್ಲೆ, 130 ತಾಲೂಕುಗಳು :  ದಾವಣಗೆರೆ ಜಿಲ್ಲೆಯ 3 ತಾಲೂಕು, ಚಾಮರಾಜನಗರದ 1, ಮಂಡ್ಯದ 3, ಬಳ್ಳಾರಿಯ 6, ಕೊಪ್ಪಳದ 3, ರಾಯಚೂರಿನ 5, ಕಲಬುರಗಿಯ 9, ಯಾದಗಿರಿಯ 5, ಬೀದರ್‌ನ 4, ಬೆಳಗಾವಿಯ 13, ಬಾಗಲಕೋಟೆಯ 9, ವಿಜಯಪುರ 4, ಗದಗ 4, ಹಾವೇರಿ 6, ಧಾರವಾಡ 7, ಶಿವಮೊಗ್ಗ 7, ಹಾಸನ 5, ಚಿಕ್ಕಮಗಳೂರು 6, ಕೊಡಗು 3, ದಕ್ಷಿಣ ಕನ್ನಡ 6, ಉಡುಪಿಯ 7 ತಾಲೂಕಗಳನ್ನು ನೆರೆಪೀಡಿತ ತಾಲೂಕುಗಳಾಗಿ ಘೋಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ